Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಲಿತ ಹೋರಾಟಗಾರ ಓಂಕಾರಪ್ಪ ಪೂಜಾರ್ ನಿಧನಕ್ಕೆ ವಿವಿಧ ಸಂಘಟನೆಗಳಿಂದ ಭಾವಪೂರ್ಣ ಶ್ರದ್ದಾಂಜಲಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.03 : ದಲಿತ ಹೋರಾಟಗಾರ, ಆಟೋ ಚಾಲಕರ ಸಂಘದ ಅಧ್ಯಕ್ಷರಾಗಿದ್ದ ಓಂಕಾರಪ್ಪ ಪೂಜಾರ್ ನಿಧನಕ್ಕೆ ವಿವಿಧ ದಲಿತಪರ ಸಂಘಟನೆಗಳಿಂದ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಸಮೀಪ ಓಂಕಾರಪ್ಪ ಪೂಜಾರ್ ಭಾವಚಿತ್ರಕ್ಕೆ ಹೂಮಾಲೆ ಸಲ್ಲಿಸಿ ಮಾತನಾಡಿದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಓಂಕಾರಪ್ಪ ಪೂಜಾರ್ ಅನೇಕ ವರ್ಷಗಳ ಕಾಲ ದಲಿತರ ಪರವಾಗಿ ಹೋರಾಟ ಮಾಡಿಕೊಂಡು ಬಂದವರು. ಎಲ್ಲಿಯೇ ದಲಿತರ ಮೇಲೆ ದೌರ್ಜನ್ಯ, ಹಲ್ಲೆ ದಬ್ಬಾಳಿಕೆಯಾದರೆ ಅಲ್ಲಿ ಹೋರಾಟಕ್ಕೆ ಮುಂಚೂಣಿಯಲ್ಲಿರುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ಕೋರಿ ದುಃಖತಪ್ತ ಕುಟಂಬಕ್ಕೆ ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸಿದರು.

ಪ್ರಕಾಶ್ ಬೀರಾವರ ಮಾತನಾಡಿ ಓಂಕಾರಪ್ಪ ಪೂಜಾರ್ ಹೋರಾಟಕ್ಕಾಗಿಯೇ ಜೀವನವನ್ನು ಮುಡುಪಾಗಿಟ್ಟಿದ್ದರು. ಆಟೋ ಚಾಲಕರ ಸಂಘದ ಅಧ್ಯಕ್ಷರಾಗಿದ್ದಾಗ ಆಟೋ ಚಾಲಕರು ಹಾಗೂ ಮಾಲೀಕರುಗಳ ಸಮಸ್ಯೆ ನಿವಾರಣೆ ಹಾಗೂ ಬೇಡಿಕೆಗಳ ಈಡೇರಿಕೆಗಾಗಿ ಸಾಕಷ್ಟು ಹೋರಾಟ ಮಾಡಿದ್ದನ್ನು ನೆನಪಿಸಿಕೊಂಡರು.

ರವಿ ಇಂಗಳದಾಳ್, ತಿಮ್ಮರಾಜು ಹಿರಿಯೂರು, ವಿಶ್ವನಾಥ, ಕಣಿವೆಮಾರಮ್ಮ ಯುವಕ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...