Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಲಿತ ಹೋರಾಟಗಾರ ಓಂಕಾರಪ್ಪ ಪೂಜಾರ್ ನಿಧನಕ್ಕೆ ವಿವಿಧ ಸಂಘಟನೆಗಳಿಂದ ಭಾವಪೂರ್ಣ ಶ್ರದ್ದಾಂಜಲಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.03 : ದಲಿತ ಹೋರಾಟಗಾರ, ಆಟೋ ಚಾಲಕರ ಸಂಘದ ಅಧ್ಯಕ್ಷರಾಗಿದ್ದ ಓಂಕಾರಪ್ಪ ಪೂಜಾರ್ ನಿಧನಕ್ಕೆ ವಿವಿಧ ದಲಿತಪರ ಸಂಘಟನೆಗಳಿಂದ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಸಮೀಪ ಓಂಕಾರಪ್ಪ ಪೂಜಾರ್ ಭಾವಚಿತ್ರಕ್ಕೆ ಹೂಮಾಲೆ ಸಲ್ಲಿಸಿ ಮಾತನಾಡಿದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಓಂಕಾರಪ್ಪ ಪೂಜಾರ್ ಅನೇಕ ವರ್ಷಗಳ ಕಾಲ ದಲಿತರ ಪರವಾಗಿ ಹೋರಾಟ ಮಾಡಿಕೊಂಡು ಬಂದವರು. ಎಲ್ಲಿಯೇ ದಲಿತರ ಮೇಲೆ ದೌರ್ಜನ್ಯ, ಹಲ್ಲೆ ದಬ್ಬಾಳಿಕೆಯಾದರೆ ಅಲ್ಲಿ ಹೋರಾಟಕ್ಕೆ ಮುಂಚೂಣಿಯಲ್ಲಿರುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ಕೋರಿ ದುಃಖತಪ್ತ ಕುಟಂಬಕ್ಕೆ ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸಿದರು.

ಪ್ರಕಾಶ್ ಬೀರಾವರ ಮಾತನಾಡಿ ಓಂಕಾರಪ್ಪ ಪೂಜಾರ್ ಹೋರಾಟಕ್ಕಾಗಿಯೇ ಜೀವನವನ್ನು ಮುಡುಪಾಗಿಟ್ಟಿದ್ದರು. ಆಟೋ ಚಾಲಕರ ಸಂಘದ ಅಧ್ಯಕ್ಷರಾಗಿದ್ದಾಗ ಆಟೋ ಚಾಲಕರು ಹಾಗೂ ಮಾಲೀಕರುಗಳ ಸಮಸ್ಯೆ ನಿವಾರಣೆ ಹಾಗೂ ಬೇಡಿಕೆಗಳ ಈಡೇರಿಕೆಗಾಗಿ ಸಾಕಷ್ಟು ಹೋರಾಟ ಮಾಡಿದ್ದನ್ನು ನೆನಪಿಸಿಕೊಂಡರು.

ರವಿ ಇಂಗಳದಾಳ್, ತಿಮ್ಮರಾಜು ಹಿರಿಯೂರು, ವಿಶ್ವನಾಥ, ಕಣಿವೆಮಾರಮ್ಮ ಯುವಕ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!