ಬೆಂಗಳೂರು.ಜೂನ್.22: ಕರ್ನಾಟಕದಾದ್ಯಂತ ಮಳೆ ಚಟುವಟಿಕೆಗಳು ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ದಟ್ಟವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗದ ಜನರಲ್ಲಿ ಮಳೆಯ ಆತಂಕ ಮತ್ತೊಮ್ಮೆ ಶುರುವಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಕರಾವಳಿ ತೀರ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಗಮನಾರ್ಹವಾಗಿ ಹೆಚ್ಚಾಗಲಿದ್ದು, ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.
ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯದ ಹಲವೆಡೆ ಕೇವಲ ಮಳೆಯಷ್ಟೇ ಅಲ್ಲದೆ, ಗುಡುಗು ಮತ್ತು ಮಿಂಚಿನ ಆರ್ಭಟವೂ ಜೋರಾಗಿರಲಿದೆ. ದಕ್ಷಿಣ ಒಳನಾಡಿನ ವಿವಿಧ ಭಾಗಗಳ ಜೊತೆಗೆ ರಾಜಧಾನಿ ಬೆಂಗಳೂರು ನಗರದಲ್ಲಿಯೂ ಗಾಳಿಯ ವೇಗ ಹೆಚ್ಚಿರಲಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







