Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನ್ಮದಿನದಂದು ವಾಟಾಳ್ ಕನ್ನಡಕ್ಕಾಗಿ ಮಾಡಿದ ಶಪಥ ಎಂಥದ್ದು ಗೊತ್ತಾ..?

Facebook
Twitter
Telegram
WhatsApp

ರಾಮನಗರ: ಕಡಲೆಕಾಯಿಯನ್ನ ಬಡವರ ಬಾದಾಮಿ ಅಂತಾನೆ ಕರೆಯುತ್ತಾರೆ. ವಾಟಾಳ್ ನಾಗರಾಜ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಸಂಭ್ರಮಕ್ಕೆ ಸಾಕ್ಷಿಯಾಗಿದ್ದು ಕಡಲೇಕಾಯಿ. ಎಲ್ಲರಿಗೂ ಕಡಲೆ ಕಾಯಿ ಹಂಚಿ ತಮ್ಮ ಹುಟ್ಟುಹಬ್ಬವನ್ನ ಸ್ಒಎಷಲ್ ಆಗಿ ಆಚರಿಸಿಕೊಂಡಿದ್ದಾರೆ.

ವಾಟಾಳ್ ನಾಗರಾಜ್ ಬೆಂಬಲಿಗರೆಲ್ಲಾ ಈ ಬರ್ತ್ ಡೇ ಸಂಭ್ರಮಕ್ಕೆ ನೆರೆದಿದ್ದರು. ಈ ವೇಳೆ ರಾಮನಗರ ಬಸ್ ನಿಲ್ದಾಣದಲ್ಲೇ ಕೇಕ್ ಕತ್ತರಿಸಿ, ಸಂಭ್ರಮ ಪಟ್ಟಿದ್ದಾರೆ. ಇನ್ನು ಇದೇ ಹುಟ್ಟುಹಬ್ಬದ ದಿನ ಬೂಟಿನ ಏಟು ತಿಂದದ್ದನ್ನ ನೆನಪಿಸಿಕೊಂಡಿದ್ದಾರೆ.

1962 ಅಂದು ಬೆಂಗಳೂರಿನಲ್ಲಿ ಹಿಂದಿ ಸಿನಿಮಾ ಹೇರಿಕೆ ವಿಚಾರವನ್ನು ನಾನು ಖಂಡಿಸಿದ್ದೆ. ಅದಕ್ಕೆ ಅಂದು ಬೂಟಿನ ಏಟು ತಿಂದಿದ್ದೆ. ಅದೇ ದಿನವನ್ನ ನಾನು ಹುಟ್ಟುಹಬ್ಬವಾಗಿ ಆಚರಿಸಿಕೊಳ್ತೇನೆ. ಜೊತೆಗೆ ನಂಗೆ ಬೂಟಿನಿಂದಲ್ಲ ಗುಂಡೇಟು ಹೊಡೆದ್ರು ಕನ್ನಡದ ಮೇಲಿನ ಪ್ರೀತಿಯನ್ನ ಬಿಡಲ್ಲ, ಕನ್ನಡಕ್ಕಾಗಿಯೇ ಹೋರಾಡುತ್ತೇನೆ ಎಂದಿದ್ದಾರೆ.

ಇನ್ನು ಇದೇ ವೇಳೆ ಮೇಕೆದಾಟು ಯೋಜನೆ ಬಗ್ಗೆ ಮಾತನಾಡಿದ ವಾಟಾಳ್ ನಾಗರಾಜ್, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಹಾಗೂ ಕೇಂದ್ರ ಎರಡು ಸರ್ಕಾರಕ್ಕೂ ಆಸಕ್ತಿಯಿಲ್ಲ. ಅದಕ್ಕೆ ಇಷ್ಟೆಲ್ಲಾ ಅಡತಡೆಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!