ಡಿ.31 ಕರ್ನಾಟಕ ಬಂದ್ : ಸ್ಯಾಂಡಲ್ವುಡ್ ವಿರುದ್ಧ ಗರಂ ಆದ ವಾಟಾಳ್ ನಾಗರಾಜ್..!

suddionenews
1 Min Read

ಬೆಂಗಳೂರು: ಎಂಇಎಸ್ ಪುಂಡರ ಪುಂಡಾಟಿಕೆ ಅತಿಯಾಗಿದ್ದು, ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿ, ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಮಾಡುವುದಾಗಿ ಹೇಳಿದ್ದಾರೆ. ಇನ್ನು ಬಂದ್ ಗೆ ಸ್ಯಾಂಡಲ್ವುಡ್ ನ ನೈತಿಕ ಬೆಂಬಲ ಬೇಡ ಎಂದು ವಾಟಾಳ್ ನಾಗರಾಜ್ ಗರಂ ಆಗಿದ್ದಾರೆ.

ಈ ಸಂಬಂಧ ಮಾತನಾಡಿರುವ ವಾಟಾಳ್ ನಾಗರಾಜ್, ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಮಾಡಿಯೇ ಮಾಡ್ತೇವೆ. ಇದಕ್ಕೆ ಸ್ಯಾಂಡಲ್ವುಡ್ ಬೆಂಬಲ ನೀಡಲೇಬೇಕು. ಅವ್ರ ನೈತಿಕ ಬೆಂಬಲ ಬೇಡ. ಅವರಿಗೋಸ್ಕರ ಬೆಂಬಲದ ದಿನಾಂಕ ಬದಲಾಯಿಸಲ್ಲ. ಕನ್ನಡಕ್ಕೆ ಚಿತ್ರರಂಗಕ್ಕೆ ಆದ ಅವಮಾನದಂತೆ.

ಇದು ಕನ್ನಡಿಗೆ ಅಳಿವು ಉಳಿವಿನ ಪ್ರಶ್ನೆ. ಕನ್ನಡ ಚಿತ್ರರಂಗದ ವಿರುದ್ಧ ಮಾಡುತ್ತಿರುವ ಹೋರಾಟವಲ್ಲ. ಇದು ಕನ್ನಡ ಬಾವುಟ ಸುಟ್ಟವರ ವಿರುದ್ಧ ಮಾಡುತ್ತಿರುವ ಹೋರಾಟವಿದು. ಹೀಗಾಗಿ ಎಲ್ಲರೂ ಬೆಂಬಲ ನೀಡಬೇಕು ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *