Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಸೋಲು..!

---Advertisement---

 

ಬಾಗಲಕೋಟೆ : ಹೆಚ್ ವೈ ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಮೇಟಿ ಕುಟುಂಬದವರೇ ಗೆಲುವು ಸಾಧಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಇಂದು ಅವರ ನಂಬಿಕೆ ಉಳಿದಿದೆ, ಉಮೇಠ್ ಮೇಟಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಈ ಬಾರಿ ಗೆಲುವು ಸಾಧಿಯೇ ಸಾಧಿಸುತ್ತೇವೆ ಎಂದುಕೊಂಡಿದ್ದ ವೀರಣ್ಣ ಚರಂತಿಮಠ 22,867 ಮತಗಳ ಅಂತರದಲ್ಲಿದ್ದು, ಸೋಲನ್ನು ಒಪ್ಪಿಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಿದೆ. 20ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ. ಇನ್ನು ಕೇವಲ ಮೂರು ಸುತ್ತುಗಳ ಮತ ಎಣಿಕೆ ಮಾತ್ರ ಬಾಕಿ ಇದೆ. ಇದರಲ್ಲಿ 16,471 ಮತಗಳ ಅಂತರವಿದೆ.

ಪ್ರಾರಂಭಿಕ ಹಂತದಿಂದಾನೂ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಮುನ್ನಡೆ ಸಾಧಿಸುತ್ತಲೆ ಬಂದಿದ್ದಾರೆ. ಉಮೇಶ್ ಮೇಟಿ ಅವರು ಗೆಲುವ ಕಂಡಂತೆಯೇ ಸರಿ. ಯಾಕಂದ್ರೆ ಕೇವಲ ಮೂರು ಸುತ್ತಿನ ಮತ ಎಣಿಕೆ ಮಾತ್ರ ಇದೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಬಿಜೆಪಿ ಅಭ್ಯರ್ಥಿ ಚರಂತಿಮಠ ಕೂಡ ಗೆಲ್ಲುವಂತಹ ಅಭ್ಯರ್ಥಿಯೇ ಆಗಿದ್ದರು. ಎರಡು ಪಕ್ಷಗಳಿಗೂ ಗೆಲುವು ಬಹಳ ಮುಖ್ಯವಾಗಿತ್ತು. ಹೀಗಾಗಿ ಪ್ರಚಾರ ಕೂಡ ಜೋರಾಗಿಯೇ ನಡೆದಿತ್ತು.

ಕಾಂಗ್ರೆಸ್ ನಲ್ಲಿ ಇನ್ನು ಹೆಚ್ಚಿನ ಪ್ರಚಾರ ಕಾರ್ಯ ನಡೆದಿತ್ತು. ಸುಮಾರು ಒಂದು ವಾರಗಳ ಕಾಲ ಸಿಎಂ ಸಿದ್ದರಾಮಯ್ಯ ಅವರು ಕೂಡ ಅಲ್ಲಿಯೇ ಉಳಿದು ಪ್ರಚಾರ ನಡೆಸಿದ್ದರು. ಅನುಕಂಪದ ಅಲೆಗಿಂತ ಗ್ರೌಂಡ್ ಲೆವೆಲ್ ನಲ್ಲಿ ಕಾಂಗ್ರೆಸ್ ಪ್ರಚಾರ ಮಾಡಿರುವುದೇ ಉಮೇಶ್ ಮೇಟಿ ಅವರ ಗೆಲುವಿಗೆ ಕಾರಣ ಎನ್ನಲಾಗಿದೆ. ಅದರಲ್ಲೂ ಅಲ್ಪಸಂಖ್ಯಾತರಾಗಿರಬಹುದು, ಮಹಿಳೆಯೆ ಮತ ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...