ವೀರಶೈವ ಸಮಾಜದಿಂದ ಡಾ. ಬಸವಪ್ರಭು ಸ್ವಾಮೀಜಿ ಅವರಿಗೆ ಸನ್ಮಾನ

ಚಿತ್ರದುರ್ಗ ಫೆ. 8 : ನಗರದ ನೀಲಕಂಠೇಶ್ವರ ದೇವಸ್ಥಾನದಲ್ಲಿಂದು ವೀರಶೈವ ಸಮಾಜದ ವತಿಯಿಂದ ಕುವೆಂಪು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾದ ಡಾ. ಬಸವಪ್ರಭು ಸ್ವಾಮೀಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಶ್ರೀಗಳು ಡಾ. ಸಣ್ಣರಾಮಪ್ಪ ಅವರ ಮಾರ್ಗದರ್ಶನದಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರ ಸಾಹಿತ್ಯ ಮತ್ತು ಸಂಸ್ಕøತಿ ವಿಷಯ ಮೇಲೆ ಪಿಎಚ್.ಡಿ. ಮಹಾಪ್ರಬಂಧವನ್ನು ಮಂಡಿಸಿದ್ದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಬಸವಪ್ರಭು ಸ್ವಾಮಿಗಳು, ಜೀವನದಲ್ಲಿ ಋಣಾನುಬಂಧ ಇರುತ್ತದೆ. ತಂದೆ, ತಾಯಿ, ಗುರುಗಳ ಋಣ ಎಲ್ಲರಲ್ಲೂ ಇರುತ್ತೆ. ನನ್ನ ಗುರುಗಳನ್ನು ನಾನು ಯಾವತ್ತೂ ಮರೆಯುವುದಿಲ್ಲ. ಓದಲು ಮುರುಘಾಮಠಕ್ಕೆ ಬಂದೆ. ನಂತರದಲ್ಲಿ ನನಗೆ ದಾವಣಗೆರೆ ವಿರಕ್ತಮಠದ ಜವಾಬ್ದಾರಿ ವಹಿಸಿದರು. ನಮ್ಮ ಪೂರ್ವಿಕರಿಗೆ ಶ್ರೀಮಠದ ಬಗ್ಗೆ ಅಪಾರ ಭಕ್ತಿ ಇತ್ತು. ನನ್ನನ್ನು ಸಮಾಜದವರು ಗುರುತಿಸಿ ಸನ್ಮಾನಿಸಿರುವುದು ಅತೀವ ಸಂತಸವನ್ನುಂಟು ಮಾಡಿದೆ. ನನಗೆ ಭಕ್ತಾದಿಗಳೇ ದೇವರು ಎಂದು ಹೇಳಿದರು.

ವೀರಶೈವ ಸಮಾಜದ ಅಧ್ಯಕ್ಷ ಹೆಚ್.ಎನ್. ತಿಪ್ಪೇಸ್ವಾಮಿ ಮಾತನಾಡಿದರು. ಎಸ್.ಜೆ.ಎಂ. ಬ್ಯಾಂಕ್‍ನ ಮ್ಯಾನೇಜರ್ ಟಿ.ಕೆ. ರಾಜಶೇಖರ್, ವೈಜ್ಞಾನಿಕ ಪರಿಷತ್‍ನ ನಾಗರಾಜ್ ಸಂಗಮ್, ವಿವಿಧ ಸಂಘಟನೆಗಳು ಶ್ರೀಗಳನ್ನು ಸನ್ಮಾನಿಸಿದರು.

ಕಾರ್ಯದರ್ಶಿ ಪಿ.ವೀರೇಂದ್ರಕುಮಾರ್, ಸಹಕಾರ್ಯದರ್ಶಿ ಜಿತೇಂದ್ರ ಎನ್.ಹುಲಿಕುಂಟೆ, ನಿರ್ದೇಶಕರಾದ ಎಸ್.ವಿ. ನಾಗರಾಜಪ್ಪ ಸಿದ್ದಾಪುರ, ಡಿ.ಎಸ್. ಮಲ್ಲಿಕಾರ್ಜುನ, ಎಸ್. ಷಡಾಕ್ಷರಯ್ಯ, ಎಸ್.ವಿ.ಕೊಟ್ರೇಶ್, ಡಿ.ವಿ.ಎಸ್. ಪ್ರದೀಪ್, ಕೆ.ಎನ್. ವಿಶ್ವನಾಥಯ್ಯ, ನಿರಂಜನ ದೇವರಮನೆ, ಚಿನ್ಮಯಾನಂದ, ಶ್ರೀಮತಿ ಲತಾ ಉಮೇಶ್, ದಾವಣಗೆರೆ ಟ್ರಸ್ಟಿಗಳು ಇದ್ದರು.
ಜಿತೇಂದ್ರ ಎನ್.ಹುಲಿಕುಂಟೆ ಸ್ವಾಗತಿಸಿದರು.

suddionenews

Recent Posts

ದೆಹಲಿಯಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಪ್ರಮುಖ ಕಾರಣಗಳೇ‌ನು ಗೊತ್ತಾ ?

ಸುದ್ದಿಒನ್ : ದೇಶದಲ್ಲಿ ಮೂರು ಅವಧಿಗೆ ಅಧಿಕಾರ ಗೆದ್ದಿದ್ದರೂ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ಧ್ವಜ ಹಾರಿಸಲು ಸಾಧ್ಯವಾಗದ ಭಾರತೀಯ…

2 hours ago

ದೆಹಲಿಯಲ್ಲಿ ಬಿಜೆಪಿ ಗೆಲುವು : ಚಿತ್ರದುರ್ಗದಲ್ಲಿ ಕಾರ್ಯಕರ್ತರ ವಿಜಯೋತ್ಸವ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 08…

3 hours ago

ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆಲ್ಲಿಸುವುದು ನಮ್ಮ ಗುರಿ : ಕಾರೇಹಳ್ಳಿ ಉಲ್ಲಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ.ಫೆ. 08 :…

3 hours ago

ದಾವಣಗೆರೆ ವಿಶ್ವವಿದ್ಯಾಲಯ : ಎಸ್.ಜೆ.ಎಂ. ಕಾಲೇಜಿಗೆ 5 ನೇ ರ‌್ಯಾಂಕ್

ಚಿತ್ರದುರ್ಗ, ಫೆಬ್ರವರಿ. 08 : ದಾವಣಗೆರೆ ವಿಶ್ವವಿದ್ಯಾಲಯವು ನಡೆಸಿದ 2023-24ನೇ ಸಾಲಿನ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ನಗರದ ಚಂದ್ರವಳ್ಳಿಯ ಎಸ್.ಜೆ.ಎಂ.…

4 hours ago

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಶ್ರವಣ ಸಾಧನ ಉಚಿತ ವಿತರಣೆ

ಚಿತ್ರದುರ್ಗ ಫೆ. 08 : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಶ್ರವಣ ನ್ಯೂನತೆ ಅನುಭವಿಸುತ್ತಿದ್ದ…

4 hours ago

ಕೇಜ್ರಿವಾಲ್ ಅವರನ್ನು ಸೋಲಿಸಿದ ಬಿಜೆಪಿ ಅಭ್ಯರ್ಥಿ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಯಾರು?

ಸುದ್ದಿಒನ್ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಅವರು ನವದೆಹಲಿ…

5 hours ago