Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೀರಶೈವ ಅರ್ಬನ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ : ರಜತ ಮಹೋತ್ಸವಕ್ಕೆ ಅಧ್ಯಕ್ಷರಾಗಿ ಜೆ.ಎಂ.ಜಯಕುಮಾರ್ ಆಯ್ಕೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಅ. 08 :   ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಶ್ರೀ ನೀಲಕಂಠೇಶ್ವರ ದೇವಸ್ಥಾನದ ಎದುರಿನಲ್ಲಿರುವ ವೀರಶೈವ ಅರ್ಬನ್ ಕ್ರೆಡಿಟ್ ಕೋ. ಆಫ್. ಸೊಸೈಟಿ ಲಿ.ವತಿಯಿಂದ ಧವಳಗಿರಿ ಬಡಾವಣೆಯಲ್ಲಿ ಸೊಸೈಟಿಯಿಂದ ರಜತ ಭವನ” ನಿರ್ಮಿಸುವ ಹಿನ್ನಲೆಯಲ್ಲಿ ವಾಣಿಜ್ಯೋದ್ಯಮಿಗಳು ವೀರಶೈವ ಅರ್ಬನ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ., ಸಂಸ್ಥಾಪಕ ಅಧ್ಯಕ್ಷರಾದ ಜೆ.ಎಂ.ಜಯಕುಮಾರ್ ಅವರನ್ನು ರಜತ ಭವನ ಮತ್ತು ರಜತ ಮಹೋತ್ಸವಕ್ಕೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು ಇಂದು ಅವರಿಗೆ ಆದೇಶದ ಪತ್ರವನ್ನು ಸೊಸೈಟಿಯ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ನಿರ್ದೆಶಕರುಗಳ ಸಮ್ಮುಖದಲ್ಲಿ ನೀಡಲಾಯಿತೆಂದು ವೀರಶೈವ ಅರ್ಬನ್ ಕ್ರೆಡಿಟ್ ಕೋ. ಆಫ್. ಸೊಸೈಟಿ ಲಿ.ನ ಅಧ್ಯಕ್ಷರಾದ ಪಟೇಲ್ ಶಿವಕುಮಾರ್ ತಿಳಿಸಿದ್ದಾರೆ.

ಜೆ.ಎಂ.ಜಯಕುಮಾರ್ ರವರು ವೀರಶೈವ ಅರ್ಬನ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಂಸ್ಥಾಪಕ ಅಧ್ಯಕ್ಷರಾಗಿ ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸೊಸೈಟಿಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಅವಧಿಯಲ್ಲಿ ಸೊಸೈಟಿಯು ಸ್ವಂತ ಕಟ್ಟಡ ಹೊಂದಿದ್ದು ಮತ್ತು ಧವಳಗಿರಿ ಬಡಾವಣೆಯಲ್ಲಿ ಸೊಸೈಟಿಯಿಂದ ಸಮುದಾಯಭವನ ನಿರ್ಮಿಸುವ ದೂರದೃಷ್ಠಿಯಿಂದ ಚಿತ್ರದುರ್ಗ ನಗರಾಭಿವೃಧಿ ಪ್ರಾಧಿಕಾರದಿಂದ ನಿವೇಶನ ತಮ್ಮ ಅಧಿಕಾರಾವಧಿಯಲ್ಲಿ ಖರೀದಿಸಲಾಗಿದೆ.
ಸದರಿ ನಿವೇಶನದಲ್ಲಿ ಸೊಸೈಟಿಯು “ರಜತ” ಮಹೋತ್ಸವದ ಸವಿನೆನಪಿಗಾಗಿ “ರಜತ ಭವನ”ವನ್ನು ನಿರ್ಮಿಸಲು ತಮ್ಮ ಅಧ್ಯಕ್ಷತೆಯಲ್ಲಿಯೇ ಕಟ್ಟಡ ನಿರ್ಮಾಣವಾಗಬೇಕೆಂದು ಆಡಳಿತ ಮಂಡಲಿಯ ಮಾಸಿಕ ಸಭೆಯಲ್ಲಿ ಆಡಳಿತ ಮಂಡಳಿಯು ಸರ್ವಾನುಮತದಿಂದ ತೀರ್ಮಾಸಿದೆ. ತಾವು ರಜತ ಭವನ ಮತ್ತು ರಜತ ಮಹೋತ್ಸವದ ಅಧ್ಯಕ್ಷತೆ ವಹಿಸಿಕೊಂಡು, ಹಾಲಿ ಆಡಳಿತ ಮಂಡಲಿಯ ಸದಸ್ಯರನ್ನು ಒಳಗೊಂಡಂತೆ ಸಮಿತಿಯನ್ನು ರಚಿಸಿಕೊಳ್ಳಲು ತಮಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ತಾವು ಕೈಗೊಳ್ಳುವ ಎಲ್ಲ ತೀರ್ಮಾನಗಳಿಗೆ ಆಡಳಿತ ಮಂಡಳಿಯು ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಪಟೇಲ್ ಶಿವಕುಮಾರ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವೀರಶೈವ ಅರ್ಬನ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾದ ಜಿ.ಟಿ. ಸುರೇಶ್, ನಿರ್ದೇಶಕರುಗಳಾದ ಎಸ್. ಪರಮೇಶ್ವರಪ್ಪ, ಟಿ.ಮಹಾಂತೇಶ್, ಎಸ್.ವಿ. ನಾಗರಾಜಪ್ಪ, ಎಸ್. ಷಣ್ಮುಖಪ್ಪ (ಕೆ.ಇ.ಬಿ.) ಡಿ.ಎಸ್.ಮಲ್ಲಿಕಾರ್ಜನ್, ಬಿ.ಎಂ.ಕರಿಬಸವಯ್ಯ, ಸಿ.ಚಂದ್ರಪ್ಪ, ಶ್ರೀಮತಿ ಜಯಶ್ರೀ, ಶ್ರೀಮತಿ ಶೈಲಜಾ ಬಾಬು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸೊಸೈಟಿಯ ರಜತ ಮಹೋತ್ಸವದ ರಜತ ಭವನ ನಿರ್ಮಾಣಕ್ಕೆ ಅಧ್ಯಕ್ಷರಾದ ಜಯಕುಮಾರ್‍ರವರ ನೇತೃತ್ವದಲ್ಲಿ ಸಮಿತಿಯನ್ನು ರಚನೆಯನ್ನುನ ಮಾಡಲಾಗಿದ್ದು, ಪಟೇಲ್ ಶಿವಕುಮಾರ್ ರವರನ್ನು ಕಾರ್ಯದರ್ಶೀಯನ್ನಾಗಿ, ಉಪಾಧ್ಯಕ್ಷರಾಗಿ ಎಸ್,ಷಣ್ಮುಖಪ್ಪ (ಕೆ.ಇ.ಬಿ.), ಎಸ್.ಪರಮೇಶ್ವರಪ್ಪ, ಎಸ್.ವಿ.ನಾಗರಾಜಪ್ಪ, ನಿರ್ದೆಶಕರನ್ನಾಗಿ ಜಿ.ಟಿ.ಸುರೇಶ್, ಟಿ.ಮಹಾಂತೇಶ್, ಡಿ.ಎಸ್.ಮಲ್ಲಿಕಾರ್ಜನ್, ಬಿ.ಎಂ. ಕರಿಬಸವಯ್ಯ, ಸಿ.ಚಂದ್ರಪ್ಪ, ಶ್ರೀಮತಿ ಜಯಶ್ರೀ, ಶ್ರೀಮತಿ ಶೈಲಜಾ ಬಾಬು ಸಮಿತಿಯಲ್ಲಿ ಸೇರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now