Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಪಠ್ಯಪುಸ್ತಕದ ವಿರುದ್ಧ ವೀರಶೈವರ ಅಸಮಾಧಾನ : ಯಾಕೆ ಗೊತ್ತಾ..?

---Advertisement---

ಬೆಂಗಳೂರು: 2024-25ರ ಶೈಕ್ಷಣಿಕ ವರ್ಷ ಈಗಾಗಲೇ ಶುರುವಾಗಿದೆ. ಶಿಕ್ಷಣ ಇಲಾಖೆಯಿಂದ ಈಗಾಗಲೇ ಪುಸ್ತಕಗಳ ವಿತರಣೆಯೂ ನಡೆದಿದೆ. ಇದೀಗ ಪುಸ್ತಕದಲ್ಲಿ ಆಗಿರುವ ಪ್ರಮಾದಕ್ಕೆ ವೀರಶೈವ ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಪಾಠವಿದೆ. ಆ ಪಾಠದಲ್ಲಿ ಬಸವಣ್ಣನವರನ್ನು ಕುರಿತು ತಪ್ಪಾಗಿ ಪ್ರಕಟಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಪಠ್ಯದಲ್ಲಿ ವೀರಶೈವ ಎಂಬ ಪದವನ್ನೇ ಕೈಬಿಡಲಾಗಿದೆ. ಇದು ಸಮುದಾಯಕ್ಕೆ ಮಾಡಿದ ಅಪಮಾನವೆಂದು ವಚನಗಳ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆ ಪತ್ರ ಬರೆದಿದೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲೇನಿದೆ..?

‘ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆಯಲ್ಲಿ ವೀರಶೈವ ಧರ್ಮದ ಗುರುಪರಂಪರೆಯ ಪಂಚಪೀಠಗಳ ಶಾಖಾಮಠಗಳ ಮಠಾಧೀಶರು ಸದಸ್ಯರಾಗಿದ್ದಾರೆ. ಈ ಎಲ್ಲ ಮಠಾಧೀಶರ ಒಮ್ಮತದ ಅಭಿಪ್ರಾಯವನ್ನು ಈ ಪತ್ರದಲ್ಲಿ ತಮ್ಮ ಗಮನಕ್ಕೆ ತರುತ್ತಿದ್ದೇವೆ. ಈ ವರ್ಷದ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಬಸವಣ್ಣ ಅವರ ಪರಿಚಯವನ್ನು ಪರಿಷ್ಕರಿಸಲಾಗಿದೆ. 2016ರಿಂದ ಈಗ ಮೂರನೇ ಬಾರಿ ಪರಿಷ್ಕರಿಸಲಾಗಿದೆ. ಈ ಪರಿಷ್ಕರಣೆಯಲ್ಲಿ ವಿದ್ಯಾರ್ಥಿಗಳಿಗೆ ಅನೇಕ ತಪ್ಪು ಮಾಹಿತಿಗಳನ್ನು ನೀಡಿರುವುದು ಗಮನಕ್ಕೆ ಬಂದಿದೆ. ಬಸವಣ್ಣ ಅವರ ಪರಿಚಯದ ವೇಳೆ ವೀರಶೈವ ಪದ ಕೈ ಬಿಡಲಾಗಿದೆ. ಇದು ಸರಿಯಲ್ಲ. ಈ ವರ್ಷ ಪರಿಷ್ಕೃತಗೊಂಡಿರುವ ಪುಸ್ತಕದಲ್ಲಿ ‘ವೀರಶೈವ’ ಪದವನ್ನು ತಗೆದು ಹಾಕಲಾಗಿದೆ. ಈ ಪರಿಷ್ಕರಣೆ ಸರಿಯಲ್ಲ‌. ಯಾಕೆಂದರೆ 30 ಹೆಚ್ಚು ಶಿವಶರಣರು 142 ವಚನಗಳಲ್ಲಿ 221 ಬಾರಿ ʼವೀರಶೈವʼ ಎಂಬ ಪದ ಬಳಸಿದ್ದಾರೆ. ಕೇವಲ 8 ಜನ ಶಿವಶರಣರು ತಮ್ಮ 10 ವಚನಗಳಲ್ಲಿ 12 ಕಡೆ ಮಾತ್ರ ‘ಲಿಂಗಾಯತ’ ಪದವನ್ನು ಬಳಸಿದ್ದಾರೆ. ಆದರೆ ಬಸವಣ್ಣ ತಮ್ಮ ಒಂದು ವಚನದಲ್ಲಿಯೂ ‘ಲಿಂಗಾಯತ’ ಪದ ಬಳಸಿಲ್ಲ. ಆದರೆ ಬಸವಣ್ಣ ಅವರೇ ಅನೇಕ ಬಾರಿ ತಮ್ಮ ವಚನಗಳಲ್ಲಿ ‘ವೀರಶೈವ’ ಪದ ಬಳಸಿರುವುದಲ್ಲದೇ ತಮ್ಮದೊಂದು ವಚನದಲ್ಲಿ ತಾವು ನಿಜ ವೀರಶೈವ’ (ವಚನ ಸಂಖ್ಯೆ 1,092). ವಾಸ್ತವ ಹೀಗಿರುವಾಗ 2016 ಮತ್ತು 2022ರ ಪಠ್ಯಪುಸ್ತದಲ್ಲಿರುವ ʼವೀರಶೈವ’ ಪದವನ್ನು ತಗೆದು ಹಾಕಿರುವುದು ಸರಿಯಾದ ಕ್ರಮವಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಇದರಿಂದ ಇತಿಹಾಸವನ್ನು ತಿರುಚಿದಂತಾಗುತ್ತದೆ. ಇದು ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯ ಮತ್ತು ಕಾನೂನು ಬಾಹಿರ ಕಾರ್ಯ ಎಂದು ಪತ್ರದಲ್ಲಿ ಬರೆದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment