ರಾಜ್ಯ ಪಠ್ಯಪುಸ್ತಕದ ವಿರುದ್ಧ ವೀರಶೈವರ ಅಸಮಾಧಾನ : ಯಾಕೆ ಗೊತ್ತಾ..?

ಬೆಂಗಳೂರು: 2024-25ರ ಶೈಕ್ಷಣಿಕ ವರ್ಷ ಈಗಾಗಲೇ ಶುರುವಾಗಿದೆ. ಶಿಕ್ಷಣ ಇಲಾಖೆಯಿಂದ ಈಗಾಗಲೇ ಪುಸ್ತಕಗಳ ವಿತರಣೆಯೂ ನಡೆದಿದೆ. ಇದೀಗ ಪುಸ್ತಕದಲ್ಲಿ ಆಗಿರುವ ಪ್ರಮಾದಕ್ಕೆ ವೀರಶೈವ ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಪಾಠವಿದೆ. ಆ ಪಾಠದಲ್ಲಿ ಬಸವಣ್ಣನವರನ್ನು ಕುರಿತು ತಪ್ಪಾಗಿ ಪ್ರಕಟಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಪಠ್ಯದಲ್ಲಿ ವೀರಶೈವ ಎಂಬ ಪದವನ್ನೇ ಕೈಬಿಡಲಾಗಿದೆ. ಇದು ಸಮುದಾಯಕ್ಕೆ ಮಾಡಿದ ಅಪಮಾನವೆಂದು ವಚನಗಳ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆ ಪತ್ರ ಬರೆದಿದೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲೇನಿದೆ..?

‘ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆಯಲ್ಲಿ ವೀರಶೈವ ಧರ್ಮದ ಗುರುಪರಂಪರೆಯ ಪಂಚಪೀಠಗಳ ಶಾಖಾಮಠಗಳ ಮಠಾಧೀಶರು ಸದಸ್ಯರಾಗಿದ್ದಾರೆ. ಈ ಎಲ್ಲ ಮಠಾಧೀಶರ ಒಮ್ಮತದ ಅಭಿಪ್ರಾಯವನ್ನು ಈ ಪತ್ರದಲ್ಲಿ ತಮ್ಮ ಗಮನಕ್ಕೆ ತರುತ್ತಿದ್ದೇವೆ. ಈ ವರ್ಷದ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಬಸವಣ್ಣ ಅವರ ಪರಿಚಯವನ್ನು ಪರಿಷ್ಕರಿಸಲಾಗಿದೆ. 2016ರಿಂದ ಈಗ ಮೂರನೇ ಬಾರಿ ಪರಿಷ್ಕರಿಸಲಾಗಿದೆ. ಈ ಪರಿಷ್ಕರಣೆಯಲ್ಲಿ ವಿದ್ಯಾರ್ಥಿಗಳಿಗೆ ಅನೇಕ ತಪ್ಪು ಮಾಹಿತಿಗಳನ್ನು ನೀಡಿರುವುದು ಗಮನಕ್ಕೆ ಬಂದಿದೆ. ಬಸವಣ್ಣ ಅವರ ಪರಿಚಯದ ವೇಳೆ ವೀರಶೈವ ಪದ ಕೈ ಬಿಡಲಾಗಿದೆ. ಇದು ಸರಿಯಲ್ಲ. ಈ ವರ್ಷ ಪರಿಷ್ಕೃತಗೊಂಡಿರುವ ಪುಸ್ತಕದಲ್ಲಿ ‘ವೀರಶೈವ’ ಪದವನ್ನು ತಗೆದು ಹಾಕಲಾಗಿದೆ. ಈ ಪರಿಷ್ಕರಣೆ ಸರಿಯಲ್ಲ‌. ಯಾಕೆಂದರೆ 30 ಹೆಚ್ಚು ಶಿವಶರಣರು 142 ವಚನಗಳಲ್ಲಿ 221 ಬಾರಿ ʼವೀರಶೈವʼ ಎಂಬ ಪದ ಬಳಸಿದ್ದಾರೆ. ಕೇವಲ 8 ಜನ ಶಿವಶರಣರು ತಮ್ಮ 10 ವಚನಗಳಲ್ಲಿ 12 ಕಡೆ ಮಾತ್ರ ‘ಲಿಂಗಾಯತ’ ಪದವನ್ನು ಬಳಸಿದ್ದಾರೆ. ಆದರೆ ಬಸವಣ್ಣ ತಮ್ಮ ಒಂದು ವಚನದಲ್ಲಿಯೂ ‘ಲಿಂಗಾಯತ’ ಪದ ಬಳಸಿಲ್ಲ. ಆದರೆ ಬಸವಣ್ಣ ಅವರೇ ಅನೇಕ ಬಾರಿ ತಮ್ಮ ವಚನಗಳಲ್ಲಿ ‘ವೀರಶೈವ’ ಪದ ಬಳಸಿರುವುದಲ್ಲದೇ ತಮ್ಮದೊಂದು ವಚನದಲ್ಲಿ ತಾವು ನಿಜ ವೀರಶೈವ’ (ವಚನ ಸಂಖ್ಯೆ 1,092). ವಾಸ್ತವ ಹೀಗಿರುವಾಗ 2016 ಮತ್ತು 2022ರ ಪಠ್ಯಪುಸ್ತದಲ್ಲಿರುವ ʼವೀರಶೈವ’ ಪದವನ್ನು ತಗೆದು ಹಾಕಿರುವುದು ಸರಿಯಾದ ಕ್ರಮವಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಇದರಿಂದ ಇತಿಹಾಸವನ್ನು ತಿರುಚಿದಂತಾಗುತ್ತದೆ. ಇದು ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯ ಮತ್ತು ಕಾನೂನು ಬಾಹಿರ ಕಾರ್ಯ ಎಂದು ಪತ್ರದಲ್ಲಿ ಬರೆದಿದ್ದಾರೆ.

suddionenews

Recent Posts

ಕಾಯಕ ಪ್ರಜ್ಞೆ ಮೈಗೂಡಿಸಿಕೊಂಡರೆ ಬಸವ ತತ್ವ ಪಾಲಿಸಿದಂತೆ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…

1 minute ago

ಮಾರ್ಚ್ 01 ರಿಂದ 09 ರವರೆಗೆ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ : ಬಸವ ರಮಾನಂದ ಮಹಾಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

12 minutes ago

ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ…!

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

20 minutes ago

ವೇಷಗಾರ ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

22 minutes ago

ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು ?  ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

30 minutes ago

ಹೊಳಲ್ಕೆರೆ | ಫೆಬ್ರವರಿ 26 ರಿಂದ ಮಾರ್ಚ್ 01 ರವರೆಗೆ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

60 minutes ago