Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ವೀರೇಂದ್ರ ಹೆಗ್ಡೆ..!

---Advertisement---

ದಕ್ಷಿಣ ಕನ್ನಡ: ಧರ್ಮಸ್ಥಳದ ಬುರುಡೆ ಕೇಸ್ ರಾಜ್ಯ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಆ ವಿಚಾರ ತಣ್ಣಗಾಗಿದೆ. ಆದ್ರೆ ಎಸ್ಐಟಿ ಮಾತ್ರ ತನಿಖೆಯನ್ನು ನಡೆಸುತ್ತಲೇ ಇದೆ. ಈ ನಡುವೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

ಇಂದು ಧರ್ಮಸ್ಥಳದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಡೆ, ಧರ್ಮಸ್ಥಳ ಬೇರೆ ಅಲ್ಲ.. ಊರು ಬೇರೆ ಅಲ್ಲ ಎಲ್ಲರೂ ಒಂದೇ. ನಮ್ಮದು ಎಂಬ ಭಾವನೆ ಹೀಗೆ ಇರಲಿ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದರು. ನಾವೂ ಯಾರಿಗೂ ನೋವು ಕೊಟ್ಟಿಲ್ಲ. ಪತ್ರಿಕಾ ಮಾಧ್ಯಮದವರೇ ಕೇಳಿದರು. ಯಾಕೆ ನಿಮ್ಮ ಮೇಲೆ ಇಷ್ಟಿಂದು ದ್ವೇಷ ಅಂತ ಕೇಳ್ತಾ ಇದಾರೆ. ಅದೇ ವಿಚಾರ ನನಗೂ ಗೊತ್ತಾಗಬೇಕಿರುವುದು. ಎತ್ತರದಲ್ಲಿ ನೀರು ನಿಲ್ಲುವುದಿಲ್ಲ, ಹರಿಯಲೇಬೇಕು. ಈಗ ಹರಿದು ಬಂದಿದೆ. ಯಾರೆಲ್ಲಾ ನಮ್ಮ ಮೇಲೆ ದೃಢವಾದ ನಂಬಿಕೆ ಇಟ್ಟಿದ್ದೀರೋ ಅವರೆಲ್ಲರಿಗೂ ಧನ್ಯವಾದ. ಯಾಕೆ ಈ ಶತೃತ್ವ ಎಂಬುದನ್ನ ಹೇಳಿ ಎಂದು ಕೇಳಿದ್ದಾರೆ.

ಈ ಮೊದಲು ಹೇಳ್ತಾ ಇದ್ದೆ ಎಸ್ಐಟಿ ವರದಿ ಬಾರದೆ ನಾನು ಏನು ಮಾತನಾಡುವುದಿಲ್ಲ ಅಂತ. ಈಗ ಅರ್ಧ ರಿಪೋರ್ಟ್ ಬಂದಿದೆ. ಅದು ಧೈರ್ಯ. ಆ ವಿಚಾರ ಏನು ಮಾತನಾಡಬೇಡಿ ಎಂದು ನಮ್ಮ ವಕೀಲರು ಹೇಳಿದ್ದರು. ಸರ್ಕಾರಕ್ಕೆ ಈ ಮೂಲಕ ನಾನು ಕೃತಜ್ಞನಾಗಿದ್ದೇನೆ. ಎಸ್ಐಟಿ ಮಾಡಿ ಅವರು ಸತ್ಯ ಶೋಧನೆ ಮಾಡಿದ್ದಕ್ಕೆ ಸತ್ಯ ಹೊರಗೆ ಬಿದ್ದಿದೆ. ವೇದಿಕೆ ಮುಖ್ಯ ಅಲ್ಲ, ಹೊಗಳಿಕೆ ಮುಖ್ಯ ಅಲ್ಲ. ಅದರ ಹಿಂದಿನ ಭಾವನೆ, ಪ್ರೀತಿ ಮುಖ್ಯ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now