Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯ ನಟ ಕೆ ಶಿವರಾಮ್ ಗೆ ಹೃದಯಾಘಾತ : ಸ್ಥಿತಿ ಗಂಭೀರ, ಚಿಕಿತ್ಸೆಗೆ ಸಹಾಯ ಕೇಳಿದ ಅಭಿಮಾನಿಗಳು

Facebook
Twitter
Telegram
WhatsApp

ಬೆಂಗಳೂರು : ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಬಾ ನಲ್ಲೆ ಮಧುಚಂದ್ರಕೆ ಸಿನಿಮಾ ಮೂಲಕ ಎಲ್ಲರ ಮನಸ್ಸು ಗೆದ್ದಿದ್ದ ಹಿರಿಯ ನಟ ಕೆ ಶಿವರಾಮ್ ಅವರಿಗೆ ಹೃದಯಾಘಾತವಾಗಿದೆ.

ಸದ್ಯ ಅವರಿಗೆ ಬೆಂಗಳೂರಿನ ಎಚ್ ಸಿ ಜಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ. ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವರಾಮ್ ಅವರ ಮೆದುಳು ಕೂಡ ನಿಶ್ಕ್ರೀಯವಾಗಿದೆ ಎನ್ನಲಾಗಿದೆ. ಹೀಗಾಗಿ ಐಸಿಯುನಲ್ಲಿ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ.

ಕಳೆದ 20 ದಿನಗಳ ಹಿಂದೆಯೇ ಶಿವರಾಮ್ ಅವರ ರಕ್ತದೊತ್ತಡದಲ್ಲಿ ಏರುಪೇರಾಗಿತ್ತಂತೆ. ಹೀಗಾಗಿಯೇ ಅವರನ್ನು ಆಸ್ಪತ್ರೆಗೆ ಅಂದೇ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರಂತೆ. ಆದರೆ ಇಂದು ಹೃದಯಾಘಾತವಾಗಿದೆ ಎಂದು ಶಿವರಾಮ್ ಅವರ ಅಳಿಯ ಭರತ್ ಮಾಹಿತಿ ನೀಡಿದ್ದಾರೆ. ಅವರ ಆರೋಗ್ಯದ ಸ್ಥಿತಿ ತುಂಬಾ ಚಿಂತಾಜನಕವಾಗಿದೆ. ಬಹು ಅಂಗಾಂಗ ವೈಫಲ್ಯ ಹಾಗೂ ಹಾರ್ಟ್ ಅಟ್ಯಾಕ್ ಆಗಿದೆ ಎಂದಿದ್ದಾರೆ. ಡಾ.ಶೇಖರ್ ಪಾಟೀಲ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವರಾಮ್ ಅವರ ಚಿಕಿತ್ಸೆ ಬಗ್ಗೆ ರಾಜ್ಯ ಸರ್ಕಾರ ಈ ಕಡೆ ಗಮನ ಹರಿಸಬೇಕು ಎಂದು ಶಿವರಾಮ್ ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಇನ್ನು ಕೆ ಶಿವರಾಮ್ ಅವರಿಗೆ 71 ವರ್ಷವಾಗಿತ್ತು. ಕೆ.ಶಿವರಾಮ್ ಅವರು, ʻವಸಂತಕಾವ್ಯ’, ‘ಖಳನಾಯಕ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ನಾಗ’, ‘ಓ ಪ್ರೇಮ ದೇವತೆ ಚಿತ್ರದಲ್ಲಿ ನಟಿಸಿದ್ದಾರೆ. 2007ರಲ್ಲಿ ಬಿಡುಗಡೆ ಆದ ‘ಟೈಗರ್’ ಚಿತ್ರದ ನಂತರ ಬಣ್ಣದ ಲೋಕದಿಂದ ಅಂತರ ಕಾಪಾಡಿಕೊಂಡಿದ್ದರು ಕೆ.ಶಿವರಾಮ್. ಅವರ ಆರೋಗ್ಯ ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಬೇಡಿಕೊಳ್ಳುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!