Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯ ನಟ ಕೆ ಶಿವರಾಮ್ ಗೆ ಹೃದಯಾಘಾತ : ಸ್ಥಿತಿ ಗಂಭೀರ, ಚಿಕಿತ್ಸೆಗೆ ಸಹಾಯ ಕೇಳಿದ ಅಭಿಮಾನಿಗಳು

---Advertisement---

ಬೆಂಗಳೂರು : ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಬಾ ನಲ್ಲೆ ಮಧುಚಂದ್ರಕೆ ಸಿನಿಮಾ ಮೂಲಕ ಎಲ್ಲರ ಮನಸ್ಸು ಗೆದ್ದಿದ್ದ ಹಿರಿಯ ನಟ ಕೆ ಶಿವರಾಮ್ ಅವರಿಗೆ ಹೃದಯಾಘಾತವಾಗಿದೆ.

ಸದ್ಯ ಅವರಿಗೆ ಬೆಂಗಳೂರಿನ ಎಚ್ ಸಿ ಜಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ. ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವರಾಮ್ ಅವರ ಮೆದುಳು ಕೂಡ ನಿಶ್ಕ್ರೀಯವಾಗಿದೆ ಎನ್ನಲಾಗಿದೆ. ಹೀಗಾಗಿ ಐಸಿಯುನಲ್ಲಿ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ.

ಕಳೆದ 20 ದಿನಗಳ ಹಿಂದೆಯೇ ಶಿವರಾಮ್ ಅವರ ರಕ್ತದೊತ್ತಡದಲ್ಲಿ ಏರುಪೇರಾಗಿತ್ತಂತೆ. ಹೀಗಾಗಿಯೇ ಅವರನ್ನು ಆಸ್ಪತ್ರೆಗೆ ಅಂದೇ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರಂತೆ. ಆದರೆ ಇಂದು ಹೃದಯಾಘಾತವಾಗಿದೆ ಎಂದು ಶಿವರಾಮ್ ಅವರ ಅಳಿಯ ಭರತ್ ಮಾಹಿತಿ ನೀಡಿದ್ದಾರೆ. ಅವರ ಆರೋಗ್ಯದ ಸ್ಥಿತಿ ತುಂಬಾ ಚಿಂತಾಜನಕವಾಗಿದೆ. ಬಹು ಅಂಗಾಂಗ ವೈಫಲ್ಯ ಹಾಗೂ ಹಾರ್ಟ್ ಅಟ್ಯಾಕ್ ಆಗಿದೆ ಎಂದಿದ್ದಾರೆ. ಡಾ.ಶೇಖರ್ ಪಾಟೀಲ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವರಾಮ್ ಅವರ ಚಿಕಿತ್ಸೆ ಬಗ್ಗೆ ರಾಜ್ಯ ಸರ್ಕಾರ ಈ ಕಡೆ ಗಮನ ಹರಿಸಬೇಕು ಎಂದು ಶಿವರಾಮ್ ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಇನ್ನು ಕೆ ಶಿವರಾಮ್ ಅವರಿಗೆ 71 ವರ್ಷವಾಗಿತ್ತು. ಕೆ.ಶಿವರಾಮ್ ಅವರು, ʻವಸಂತಕಾವ್ಯ’, ‘ಖಳನಾಯಕ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ನಾಗ’, ‘ಓ ಪ್ರೇಮ ದೇವತೆ ಚಿತ್ರದಲ್ಲಿ ನಟಿಸಿದ್ದಾರೆ. 2007ರಲ್ಲಿ ಬಿಡುಗಡೆ ಆದ ‘ಟೈಗರ್’ ಚಿತ್ರದ ನಂತರ ಬಣ್ಣದ ಲೋಕದಿಂದ ಅಂತರ ಕಾಪಾಡಿಕೊಂಡಿದ್ದರು ಕೆ.ಶಿವರಾಮ್. ಅವರ ಆರೋಗ್ಯ ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಬೇಡಿಕೊಳ್ಳುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment