Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಹಲೋಕ ತ್ಯಜಿಸಿದ ಹಿರಿಯ ನಟ ಕೆ ಶಿವರಾಮ್..!

---Advertisement---

 

ಬೆಂಗಳೂರು, ಫೆಬ್ರವರಿ. 29 : ಹಿರಿಯ ನಟ, ರಾಜಕಾರಣಿ, ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಮ್ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೆ ಶಿವರಾಮ್ ಅವರು ಹೃದಯಾಘಾತಕ್ಕೂ ಒಳಗಾಗಿದ್ದರು. 71 ವರ್ಷಕ್ಕೆ ನಿಧನರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಕಳೆದ 20 ದಿನದಿಂದ ಆಸ್ಪತ್ರೆಯಲ್ಲಿಯೇ ದಾಖಲಾಗಿದ್ದರು. ಇದೀಗ ನಿಧನರಾಗಿದ್ದಾರೆ.

https://twitter.com/DKShivakumar/status/1763126143451017282?t=20DnxlQqSrHzG-qHJsomWQ&s=19

ಸರ್ಕಾರಿ ಸೇವೆ, ಸಿನಿಮಾ ಕ್ಷೇತ್ರವಲ್ಲದೆ, ರಾಜಕೀಯದಲ್ಲೂ ಶಿವರಾಮ್​ ಗುರುತಿಸಿಕೊಂಡಿದ್ದರು. 9ಕ್ಕೂ ಹೆಚ್ಚು ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ರಾಜಕೀಯಕ್ಕೂ ಧುಮುಕಿ ಲೋಕಸಭಾ ಚುನಾವಣೆಯಲ್ಲೂ ಸ್ಪರ್ಧಿಸಿದ್ದರು.

ಕೆ ಶಿವರಾಮ್ ಅವರನ್ನು ರಾಜಕೀಯ ಗಣ್ಯರು ಬೆಳಗ್ಗೆಯಿಂದಾನೇ ಆಸ್ಪತ್ರೆಗೆ ಭೇಟಿ ಕೊಟ್ಟು, ಆರೋಗ್ಯ ವಿಚಾರಿಸಿಕೊಂಡು ಬಂದಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ವಿ ಸೋಮಣ್ಣ ಸೇರಿದಂತೆ ಗಣ್ಯರು ಹಲವರು ಆಸ್ಪತ್ರೆಗೆ ಭೇಟಿ ನೀಡಿ, ವಿಚಾರಿಸಿಕೊಂಡು ಬಂದಿದ್ದರು. ಅವರ ಸ್ಥಿತಿ ಕಂಡು ಬೇಸರ ವ್ಯಕ್ತಪಡಿಸಿದ್ದರು. ಆದರೆ ಇದೀಗ ಅವರು ಇಹಲೋಕ ತ್ಯಜಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment