ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ದೊಡ್ಡ ಗೌಡರ ಮನೆಗೂ ಪ್ರತಿಷ್ಠೆಯ ಕಣವಾಗಿದೆ. ಹೀಗಾಗಿ ಮಗ, ಮೊಮ್ಮಗ ಎಲ್ಲಾ ಚನ್ನಪಟ್ಟಣದಲ್ಲಿ ಓಡಾಡುತ್ತಿದ್ದಾರೆ. ಇದರ ನಡುವೆ ಕೂಲ್ ಆದ ವಿಚಾರ ಒಂದು ನಡೆದಿದ್ದು, ಮಾಜಿ ಪ್ರಧಾನಿ ದೇವೇಗವಢರ ಮನೆಗೆ ಉಪರಾಷ್ಟ್ರಪತಿ ದಂಪತಿ ಆಗಮಿಸಿದ್ದಾರೆ. ಇವರ ಆಗಮನದಿಂದ ದೊಡ್ಡಗೌಡರ ಮನೆಯಲ್ಲಿ ಖುಷಿಯಾಗಿದ್ದಾರೆ. ಉಪರಾಷ್ಟ್ರಪತಿಗಳಾದ ಜಗದೀಶ್ ಧನಕರ್ ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಸುಧೇಶ್ ಧನಕರ್ ಆಗಮಿಸಿದ್ದರು. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಆತ್ಮೀಯತೆಯಿಂದ ದಂಪತಿಯನ್ನು ಸ್ವಾಗತಿಸಿದರು.
ಕುಮಾರಸ್ವಾಮಿ ಹಾಗೂ ದೇವೇಗೌಡರ ಜೊತೆಯಲ್ಲಿಯೇ ದಂಪತಿ ಊಟ ಮಾಡಿದರು. ಜೊತೆಗೆ ಕೂತು ರಾಷ್ಟ್ರದ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡಿದರು. ಅದರಲ್ಲೂ ಜಗದೀಪ್ ಧನಕರ್ ಅವರು ದೇವೇಗೌಡರ ಬಳಿ ಅವರ ಪತ್ನಿ ಚನ್ನಮ್ಮ ಅವರ ಆರೋಗ್ಯದ ಬಗ್ಗೆ ವಿಚಾರಸಿದರು. ಬೇಗ ಗುಣಮುಖರಾಗಲಿ ಎಂದು ಹಾರೈಸಿದರು. ಒಮ್ಮೆ ನಿಮ್ಮ ಜೊತೆಗೆ ದೆಹಲಿಗೂ ಕರೆತನ್ನಿ ಎಂದೇ ಹೇಳಿದರು. ಕುಟುಂಬಸ್ಥರು ಕೂತು ಕೊಂಚ ಸಮಯ ಮಾತಾಡಿದ ಮೇಲೆ ಉಪರಾಷ್ಟ್ರಪತಿ ಜಗದೀಪ್ ದಂಪತಿಯನ್ನು ಬೀಳ್ಕೊಟ್ಟರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಉಪರಾಷ್ಟ್ರಪತಿಗಳು ಹಾಗೂ ಮಾಜಿ ಪ್ರಧಾನಿ ದೇವೇಗೌಡರ ನಡುವೆ ಸ್ನೇಹಪೂರ್ವಕ ಬಾಂಧವ್ಯವಿದೆ. ಇಬ್ಬರು ಪರಸ್ಪರ ಗೌರವ ಭಾವ ಇರಿಸಿಕೊಂಡಿದ್ದಾರೆ. ಅದರಲ್ಲೂ ಉಪರಾಷ್ಟ್ರಪತಿಗಳು ಮಾಜಿ ಪ್ರಧಾನಿ ದೇವೇಗೌಡರ ಮೇಲೆ ಅಪಾರ ಗೌರವ ಇಟ್ಟುಕೊಂಡಿದ್ದಾರೆ. ಇದನ್ನು ಅನೇಕ ಸಲ ಕಣ್ಣಾರ ಕಂಡಿದ್ದೇನೆ. ಇಬ್ಬರೂ ನಾಯಕರು ರೈತ ಕುಟುಂಬದಿಂದ ಬಂದವರೆ. ಹೀಗಾಗಿ ಅವರಿಬ್ಬರ ಚರ್ಚೆ ಬಹುತೇಕ ಕೃಷಿ ಕೇಂದ್ರಿತವಾಗಿತ್ತು ಎಂದಿದ್ದಾರೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಬ್ಯಾಟ್ನಿಂದ ರನ್ಗಳನ್ನು ನಿರೀಕ್ಷಿಸುತ್ತಾರೆ.…