Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

30 ಗಂಟೆಗಳ ಕಾರ್ಯಾಚರಣೆಗೆ ಜಯ : ತುಂಗಾ ಭದ್ರಾ ಡ್ಯಾಂ ಸ್ಟಾಪ್ ಲಾಗ್ ಅಳವಡಿಕೆ ಸಕ್ಸಸ್..!

---Advertisement---

ವಿಜಯನಗರ: ಕಳೆದ 30 ಗಂಟೆಗಳ ಕಾರ್ಯಾಚರಣೆ ಯಶಸ್ವಿಯಾಗಿದೆ. ತುಂಗಾಭದ್ರಾ ಡ್ಯಾಂಗೆ ಸ್ಟಾಪ್ ಲಾಗ್ ಅಳವಡಿಕೆ ಮಾಡುವ ಕಾರ್ಯ ಯಶಸ್ವಿಯಾಗಿ ಸಾಗಿದೆ. ತಾತ್ಕಾಲಿಕ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಕಡೆಗೂ ಯಶಸ್ವಿಯಾಗಿದೆ. ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ಅವರ ಪ್ಲ್ಯಾನ್ ಸಕ್ಸಸ್ ಆಗಿದೆ. ಟಿ.ಬಿ. ಡ್ಯಾಂ ಕ್ರಸ್ಟ್ ಗೇಟ್ 19 ದುರಸ್ತಿ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಮೊದಲ ಸ್ಟಾಪ್ ಲಾಗ್ ಅಳವಡಿಕೆ ಮಾಡಿ, ನಿಟ್ಟುಸಿರು ಬಿಡಲಾಗಿತ್ತು. ಇಂದು 3 ಸ್ಟಾಪ್ ಲಾಗ್ ಅಳವಡಿಕೆಯನ್ನು ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದೆ.

ಮೂರು ದಿನ ಸತತ ಮೂವತ್ತು ಗಂಟೆಗಳ ಕಾರ್ಯಾಚರಣೆ ಇದಾಗಿದ್ದು, ಟಿಬಿ ಡ್ಯಾಂ ಅಧಿಕಾರಿಗಳು ಈಗ ಜಲಾಶಯದ ಸಂಪೂರ್ಣ ಹೊರ ಹರಿವು ಬಂದ್ ಮಾಡಿದ್ದಾರೆ. ನಿನ್ನೆ ರಾತ್ರಿ ಮೊದಲ ಸ್ಪಾಟ್ ಲಾಗ್ ಅಳವಡಿಕೆ ಕಾರ್ಯ ಶುರುವಾಗಿತ್ತು. ಸರಿಯಾಗಿ 26 ನಿಮಿಷಗಳಲ್ಲಿ ಮೂರನೇ ಸ್ಟಾಪ್ ಲಾಗ್ ಅಳವಡಿಕೆ ಮಾಡಲಾಯಿತು. 19ನೇ ಗೇಟ್ ನಲ್ಲಿ ಮೊದಲ ಸ್ಟಾಪ್ ಲಾಗ್ ಅಳವಡಿಸಿದ ಮೇಲೆ ನಿನ್ನೆ ಡ್ಯಾಂನ 33 ಗೇಟ್ ಗಳಲ್ಲಿ 25 ಗೇಟ್ ಗಳಿಂದ ನೀರು ಹರಿಸಲಾಗಿತ್ತು.

ನಿನ್ನೆ ಒಂದೇ ದಿನ ಎಂಟು ಗೇಟ್ ಗಳನ್ನು ಕ್ಲೋಸ್ ಮಾಡಲಾಗಿತ್ತು. ಇಂದು ಎರಡನೇ ಸ್ಟಾಪ್ ಲಾಗ್ ಅಳವಡಿಸಿದ ನಂತರ ಮತ್ತೆ ನಾಲ್ಕನೇ ಗೇಟ್ ಕ್ಲೋಸ್ ಮಾಡಲಾಗಿದೆ. ಇನ್ನು ತುಂಗಾಭದ್ರಾ ಡ್ಯಾಂನ 33 ಗೇಟ್ ಗಳಲ್ಲಿ 19 ಗೇಟ್ ಹೊರತುಪಡಿಸಿ ಎಲ್ಲಾ ಗೇಟ್ ಗಳನ್ನು ಕ್ಲೋಸ್ ಮಾಡಲಾಗಿದೆ. 105 ಟಿಎಂಸಿ ನೀರಿನಲ್ಲಿ ಕಳೆದ ಆರು ದಿನಗಳಿಂದ 40-45 ಟಿಎಂಸಿ ನೀರು ವ್ಯರ್ಥವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...