Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

30 ಗಂಟೆಗಳ ಕಾರ್ಯಾಚರಣೆಗೆ ಜಯ : ತುಂಗಾ ಭದ್ರಾ ಡ್ಯಾಂ ಸ್ಟಾಪ್ ಲಾಗ್ ಅಳವಡಿಕೆ ಸಕ್ಸಸ್..!

Facebook
Twitter
Telegram
WhatsApp

ವಿಜಯನಗರ: ಕಳೆದ 30 ಗಂಟೆಗಳ ಕಾರ್ಯಾಚರಣೆ ಯಶಸ್ವಿಯಾಗಿದೆ. ತುಂಗಾಭದ್ರಾ ಡ್ಯಾಂಗೆ ಸ್ಟಾಪ್ ಲಾಗ್ ಅಳವಡಿಕೆ ಮಾಡುವ ಕಾರ್ಯ ಯಶಸ್ವಿಯಾಗಿ ಸಾಗಿದೆ. ತಾತ್ಕಾಲಿಕ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಕಡೆಗೂ ಯಶಸ್ವಿಯಾಗಿದೆ. ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ಅವರ ಪ್ಲ್ಯಾನ್ ಸಕ್ಸಸ್ ಆಗಿದೆ. ಟಿ.ಬಿ. ಡ್ಯಾಂ ಕ್ರಸ್ಟ್ ಗೇಟ್ 19 ದುರಸ್ತಿ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಮೊದಲ ಸ್ಟಾಪ್ ಲಾಗ್ ಅಳವಡಿಕೆ ಮಾಡಿ, ನಿಟ್ಟುಸಿರು ಬಿಡಲಾಗಿತ್ತು. ಇಂದು 3 ಸ್ಟಾಪ್ ಲಾಗ್ ಅಳವಡಿಕೆಯನ್ನು ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದೆ.

ಮೂರು ದಿನ ಸತತ ಮೂವತ್ತು ಗಂಟೆಗಳ ಕಾರ್ಯಾಚರಣೆ ಇದಾಗಿದ್ದು, ಟಿಬಿ ಡ್ಯಾಂ ಅಧಿಕಾರಿಗಳು ಈಗ ಜಲಾಶಯದ ಸಂಪೂರ್ಣ ಹೊರ ಹರಿವು ಬಂದ್ ಮಾಡಿದ್ದಾರೆ. ನಿನ್ನೆ ರಾತ್ರಿ ಮೊದಲ ಸ್ಪಾಟ್ ಲಾಗ್ ಅಳವಡಿಕೆ ಕಾರ್ಯ ಶುರುವಾಗಿತ್ತು. ಸರಿಯಾಗಿ 26 ನಿಮಿಷಗಳಲ್ಲಿ ಮೂರನೇ ಸ್ಟಾಪ್ ಲಾಗ್ ಅಳವಡಿಕೆ ಮಾಡಲಾಯಿತು. 19ನೇ ಗೇಟ್ ನಲ್ಲಿ ಮೊದಲ ಸ್ಟಾಪ್ ಲಾಗ್ ಅಳವಡಿಸಿದ ಮೇಲೆ ನಿನ್ನೆ ಡ್ಯಾಂನ 33 ಗೇಟ್ ಗಳಲ್ಲಿ 25 ಗೇಟ್ ಗಳಿಂದ ನೀರು ಹರಿಸಲಾಗಿತ್ತು.

ನಿನ್ನೆ ಒಂದೇ ದಿನ ಎಂಟು ಗೇಟ್ ಗಳನ್ನು ಕ್ಲೋಸ್ ಮಾಡಲಾಗಿತ್ತು. ಇಂದು ಎರಡನೇ ಸ್ಟಾಪ್ ಲಾಗ್ ಅಳವಡಿಸಿದ ನಂತರ ಮತ್ತೆ ನಾಲ್ಕನೇ ಗೇಟ್ ಕ್ಲೋಸ್ ಮಾಡಲಾಗಿದೆ. ಇನ್ನು ತುಂಗಾಭದ್ರಾ ಡ್ಯಾಂನ 33 ಗೇಟ್ ಗಳಲ್ಲಿ 19 ಗೇಟ್ ಹೊರತುಪಡಿಸಿ ಎಲ್ಲಾ ಗೇಟ್ ಗಳನ್ನು ಕ್ಲೋಸ್ ಮಾಡಲಾಗಿದೆ. 105 ಟಿಎಂಸಿ ನೀರಿನಲ್ಲಿ ಕಳೆದ ಆರು ದಿನಗಳಿಂದ 40-45 ಟಿಎಂಸಿ ನೀರು ವ್ಯರ್ಥವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!