ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

1 Min Read

ಸುದ್ದಿಒನ್, ಚಿತ್ರದುರ್ಗ, ನವೆಂಬರ್.24 :ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ದೇವರಾಜ್ ಅರಸು ಶಿಕ್ಷಣ ಸಂಸ್ಥೆಯವರು ನಡೆಸಿರುವ ಅಂತರ್ ಶಾಲಾ ಮಟ್ಟದ ಕ್ರಿಕೆಟ್‍ನಲ್ಲಿ ಚಾಂಪಿಯನ್ ಪ್ರಶಸ್ತಿ ಪಡೆದು ಮತ್ತು ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

ಬಾಲಕರ ವಿಭಾಗ (ಕ್ರಿಕೆಟ್)
•ಮಿತುನ್ ದೇವ್.ಡಿ.  ಅಲ್ ರೌಂಡರ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.
•ಭರತ್.ಡಿ.ಆರ್ ಅತ್ಯುತ್ತಮ ಬೌಲರ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಬಾಲಕಿಯರ ವಿಭಾಗ  (ಚದುರಂಗ)
•ಶ್ರೇಯಾ ಎಂ. ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಶಾಲೆಗೆ ಕೀರ್ತಿ ತಂದ  ಕ್ರೀಡಾಪಟುಗಳಿಗೆ  ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್,  ಸಂಸ್ಥೆಯ ನಿರ್ದೇಶಕರಾದ ಶ್ರೀ.ಎಸ್.ಎಂ ಪೃಥ್ವೀಶ್ ಹಾಗೂ ಶ್ರೀಮತಿ ಸುನಿತಾ.ಪಿ.ಸಿ, ಸಂಸ್ಥೆಯ ಅಕಾಡೆಮಿಕ್ ಅಡ್ಮಿನಿಸ್ಟ್ರೇಟರ್ ಡಾ|| ಸ್ವಾಮಿ ಕೆ.ಎನ್, ಮುಖ್ಯ ಶಿಕ್ಷಕರಾದ ಸಂಪತ್ ಕುಮಾರ್.ಸಿ.ಡಿ, ಐಸಿಎಸ್‍ಇ ಪ್ರಿನ್ಸಿಪಾಲರಾದ ಬಸವರಾಜಯ್ಯ.ಪಿ ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ  ವೃಂದದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *