Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ವಿದ್ಯಾವಿಕಾಸ ಶಾಲೆಯಲ್ಲಿ “ಸ್ವಚ್ಛತಾ ಪಕ್ವಾಡ” ಜಾಗೃತಿ ಕಾರ್ಯಕ್ರಮ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.16 :ನಗರದ ವಿದ್ಯಾವಿಕಾಸ ಶಾಲೆಯಲ್ಲಿ ಕೇಂದ್ರಸರ್ಕಾರದ ಆದೇಶದನ್ವಯ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ “ಸ್ವಚ್ಛತಾ ಪಕ್ವಾಡ – 2023” ಕಾರ್ಯಕ್ರಮವನ್ನು ಹಮ್ಮಿಕೊಂಡು ವಿವಿಧ ಚಟುವಟಿಕೆಗಳನ್ನು ಯೋಜನಾತ್ಮಕವಾಗಿ ನಡೆಸಲಾಯಿತು.

ಕಾರ್ಯಕ್ರಮದ ರೂಪುರೇಷೆಯೊಂದಿಗೆ 1ನೇ ಸೆಪ್ಟಂಬರ್ 2023 ರಂದು “ಸ್ವಚ್ಛತಾ ಸಪ್ತಾಹ ದಿನ ಅಂಗವಾಗಿ ಬೆಳಗಿನ ಶಾಲಾ ಪ್ರಾರ್ಥನಾ ಸಭೆಯಲ್ಲಿ ಸ್ವಚ್ಛತಾ ಪಕ್ವಾಡದ ಉದ್ದೇಶ ಮತ್ತು ಮಹತ್ವದ ಬಗೆಗಿನ ಅರಿವು ಮೂಡಿಸುವ ಪೀಠಿಕೆಯನ್ನು ಶಿಕ್ಷಕರಾದ ಎನ್.ಜಿ. ತಿಪ್ಪೇಸ್ವಾಮಿಯವರು ನೆರವೇರಿಸುವುದರೊಂದಿಗೆ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಪ್ರತಿಜ್ಞಾವಿಧಿಯನ್ನು ಶಿಕ್ಷಕರಾದ ಶ್ರೀ ಆರಿಫ್‍ರವರು ಬೋಧಿಸಿದರು.

ವಿದ್ಯಾರ್ಥಿಗಳೆಲ್ಲರೂ ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಕೈಗೊಳ್ಳುವ ಮೂಲಕ ಆರಂಭವಾದ ಸಪ್ತಾಹ, “ಸ್ವಚ್ಛತಾ ಅರಿವು ದಿನ”,”ಹಸಿರು ಶಾಲೆ ದಿನ”,”ಸ್ವಚ್ಛತಾ ಭಾಗಿ ದಿನ”, “ಕರ ಸ್ವಚ್ಛತಾ ದಿನ” ಎಂಬಿತ್ಯಾದಿ ದಿನಗಳ ಅಡಿಯಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ “ಸ್ವಚ್ಛತೆ ಮತ್ತು ವೈಯಕ್ತಿಕ ಕಾಳಜಿ” ಹಾಗೂ ಸಮುದಾಯ ಭಾಗಿತ್ವಕ್ಕೆ ಸಹಕರಿಸುವಂತೆ, ನಗರದ ವಿವಿಧ ಪ್ರದೇಶಗಳಿಗೆ ತೆರಳಿ ಸ್ವಚ್ಛತೆಯ ಬಗೆಗಿನ ಅರುವು ಮೂಡಿಸುವ ಕಾರ್ಯಕ್ರಮ, ಜಾಥಾ, ಪ್ರಬಂಧ ರಚನೆ, ಕವನ ರಚನೆ ಮತ್ತು ಚಿತ್ರ ರಚನೆಯ ವಿವಿಧ ಸ್ಪರ್ಧೆಗಳನ್ನು ಶಾಲೆಯಲ್ಲಿ ಏರ್ಪಡಿಸಿ ಸ್ವಚ್ಛತೆಯ ಬಗೆಗಿನ ಅರಿವು ಮೂಡಿಸಲಾಯಿತು.

ದಿನಾಂಕ : 15 – 09 – 2023 ರಂದು “ಪ್ರಶಸ್ತಿ ಪ್ರಧಾನ ದಿನ”ವನ್ನು ಆಚರಿಸುವ ಅಂಗವಾಗಿ “ಸ್ವಚ್ಛತಾ ಪಕ್ವಾಡ – 2023” ಕಾರ್ಯಕ್ರಮದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸುವ ಕಾರ್ಯವನ್ನು ಮಾಡುವುದರೊಂದಿಗೆ “ಸ್ವಚ್ಛತಾ ಪಕ್ವಾಡ – 2023” ಕಾರ್ಯಕ್ರಮ ಸಮಾಪ್ತಿಗೊಳಿಸಲಾಯಿತು.

ಪ್ರಸ್ತುತ “ಸ್ವಚ್ಛತಾ ಪಕ್ವಾಡ – 2023” ಕಾರ್ಯಕ್ರಮದ ಈ ಎಲ್ಲಾ ಚಟುವಟಿಕೆಗಳನ್ನು ಶಾಲೆಯಲ್ಲಿ ಹಮ್ಮಿಕೊಂಡು ಸಮುದಾಯದ ಸಂಪರ್ಕ ಹಾಗೂ ನೈರ್ಮಲ್ಯೀಕರಣದ ಮಹತ್ವವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ ಕಾರ್ಯವನ್ನು ಕೈಗೊಂಡ ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಶಿಕ್ಷಕರಾದ ಎಂ.ಟಿ.ಬಸವಂತಕುಮಾರ್ ಅವರಿಗೆ   ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ||.ಸ್ವಾಮಿ.ಕೆ.ಎನ್ ಐಸಿಎಸ್‍ಇ ಪ್ರಿನ್ಸಿಪಾಲರಾದ ಬಸವರಾಜಯ್ಯ.ಪಿ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀ.ಸಿ.ಡಿ.ಸಂಪತ್‍ಕುಮಾರ್ ಹಾಗೂ ಎಲ್ಲಾ ಶಿಕ್ಷಕ/ಶಿಕ್ಷಕೇತರ  ವೃಂದ, ಅಭಿನಂದನೆಗಳನ್ನು ಸಲ್ಲಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಐಎಂಎ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ

error: Content is protected !!