ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 : ವಿಜ್ಞಾನ ಶಿಕ್ಷಕರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಪ್ರತಿವರ್ಷ ನೀಡುವ ‘ವಿಜ್ಞಾನ ರತ್ನ’ ಪ್ರಶಸ್ತಿಗೆ 2026-27ನೇ ಸಾಲಿನಲ್ಲಿ ಜಿಲ್ಲೆಯ ಆರು ಶಿಕ್ಷಕರನ್ನು ಆಯ್ಕೆ ಮಾಡಿದೆ.
ಪ್ರಶಸ್ತಿಗೆ ಆಯ್ಕೆಯಾದವರ ವಿವರ ಹೀಗಿದೆ:
1. C.G. ಹಾಲೇಶ್ – ಚವಲಿಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆ, ಚಿತ್ರದುರ್ಗ ತಾಲ್ಲೂಕು
2. T.J. ವೆಂಕಟೇಶ್ – ಪಾಲವ್ವನಹಳ್ಳಿ ಸರ್ಕಾರಿ ಪ್ರೌಢಶಾಲೆ, ಹಿರಿಯೂರು ತಾಲ್ಲೂಕು
3. B.K. ಪ್ರಮೀಳಾ – ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ಹೊಸದುರ್ಗ ತಾಲ್ಲೂಕು
4. ಸೈಯದ್ ಸಾದಿಕ್ ಬಾಷಾ – ಚಿತ್ರಹಳ್ಳಿ ಗ್ರಾಮಾಂತರ ಪ್ರೌಢಶಾಲೆ, ಹೊಳಲ್ಕೆರೆ ತಾಲ್ಲೂಕು
5. S.K. ವಿರೂಪಾಕ್ಷ – ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ, ಮೊಳಕಾಲ್ಮೂರು ತಾಲ್ಲೂಕು
6. B.A. ಮಮತಾದೇವಿ – ದೇವರೆಡ್ಡಿಹಳ್ಳಿ ಗ್ರಾಮಾಂತರ ಪ್ರೌಢಶಾಲೆ, ಚಳ್ಳಕೆರೆ ತಾಲ್ಲೂಕು

ಈ ಆರು ಶಿಕ್ಷಕರನ್ನು ಸೆಪ್ಟೆಂಬರ್ 7, 2026ರಂದು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ‘ವಿಜ್ಞಾನ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ. ಸ್ವಾಮಿ ಅವರು ಪ್ರಕಟಣೆಯಲ್ಲಿ ಈ ಮಾಹಿತಿ ತಿಳಿಸಿದ್ದಾರೆ.










