Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಚಿಕಿತ್ಸೆಯ ವಿಚಾರದಲ್ಲಿ ಗೌಪ್ಯತೆ ಕಾಪಾಡಲು ವಿಜಯಲಕ್ಷ್ಮೀ ಮನವಿ..!

---Advertisement---

ಬೆಂಗಳೂರು: ವಿಪರೀತ ಬೆನ್ನು ನೋವಿನ ಸಮಸ್ಯೆಯಿಂದ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದಾರೆ. ನಿನ್ನೆಯೇ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದಾರೆ. ದರ್ಶನ್ ನಿನ್ನೆ ಅಪಾರ್ಟ್ಮೆಂಟ್ ನಿಂದ ಹೊರಟಾಗಿನಿಂದ ಹಿಡಿದು ಆಸ್ಪತ್ರೆ ಸೇರುವ ತನಕವೂ ಮೀಡಿಯಾದವರು ಕವರೇಜ್ ಮಾಡಿದ್ದರು. ಚಿಕಿತ್ಸೆಯ ಇಂಚಿಂಚು ಮಾಹಿತಿಯನ್ನು ಪ್ರಸಾರ ಮಾಡಲಾಗಿತ್ತು. ವೈದ್ಯರ ಬಳಿ ಮಾಹಿತಿಯನ್ನು ಕಲೆ ಹಾಕಲಾಗಿತ್ತು. ಇದೀಗ ದರ್ಶನ್ ಅವರ ಚಿಕಿತ್ಸೆಯ ಯಾವ ವಿಚಾರವನ್ನು ಹೊರಗೆ ಹೇಳದಂತೆ ಮನವಿ ಮಾಡಿದ್ದಾರೆ.

ಬಿಜಿಎಸ್ ಆಸ್ಪತ್ರೆಯ ಮಂಡಳಿ ಜೊತೆಗೆ ವಿಜಯಲಕ್ಷ್ಮೀ ವೈಯಕ್ತಿಕವಾಗಿ ಮನವಿ ಮಾಡಿದ್ದು, ದರ್ಶನ್ ಅವರ ಚಿಕಿತ್ಸೆಯ ವಿಚಾರಗಳನ್ನು ಗೌಪ್ಯವಾಗಿಡುವಂತೆ ಮನವಿ‌ ಮಾಡಿದ್ದಾರೆ. ಬಿಜಿಎಸ್ ಆಸ್ಪತ್ರೆಯ ಆಡಳಿತ ಮಂಡಳಿ ಕೂಡ ಇದಕ್ಕೆ ಒಪ್ಪಿದ್ದು, ವೈದ್ಯರಿಗೂ ತಾಕೀತು ಮಾಡಿದ್ದು, ದರ್ಶನ್ ಅವರ ಹೆಲ್ತ್ ರಿಪೋರ್ಟ್ ನೀಡದಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದರು. ಬಳ್ಳಾರಿ ಜೈಲು ಸೇರಿದ ಮೇಲೆ ಬೆನ್ನು ನೋವು ಅತಿಯಾಗಿ ಕಾಡಿತ್ತು. ಹೀಗಾಗಿ ಅದರ ಚಿಕಿತ್ಸೆಯ ಭಾಗವಾಗಿ ಜಾಮೀನು ಪಡೆದಿದ್ದಾರೆ. ಇನ್ನು ಆರು ವಾರಗಳ ಕಾಲ ಚಿಕಿತ್ಸೆಗಾಗಿಯೇ ಬಳಸಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ ಚಿಕಿತ್ಸೆ ಪಡೆಯಲು ದರ್ಶನ್ ಆಸ್ಪತ್ರೆ ಸೇರಿದ್ದಾರೆ. ಈಗಾಗಲೇ ಎಲ್ಲಾ ರೀತಿಯ ಪರೀಕ್ಷೆಗಳನ್ನು ಮಾಡಲಾಗಿದೆ. ಹಲವು ಪರೀಕ್ಷೆಯ ವರದಿ ಬಂದಿದ್ದು, ಇನ್ನಷ್ಟು ಪರೀಕ್ಷೆಗಳ ವರದಿ ಬರಬೇಕಿದೆ. ವರದಿ ಆಧರಿಸಿ ಯಾವ ರೀತಿಯ ಚಿಕಿತ್ಸೆ ನೀಡಬಹುದು ಎಂಬುದರ ಬಗ್ಗೆ ವೈದ್ಯರು ಅವಲೋಕಿಸುತ್ತಾರೆ. ಸದ್ಯಕ್ಕೆ ಫಿಸಿಯೋಥೆರಪಿಯನ್ನು ಆರಂಭಿಸಿದ್ದಾರೆ. ಆದಷ್ಟು ಬೇಗ ಹುಷರಾಗಿ ಬಾಸ್ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment