Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ಅವರನ್ನ ವಿಜಯಲಕ್ಷ್ಮೀ ಭೇಟಿ ಮಾಡಿದ್ದು ದರ್ಶನ್ ವಿಚಾರಕ್ಕಲ್ಲ : ಮತ್ಯಾಕೆ ಗೊತ್ತಾ..?

---Advertisement---

 

 

ಬೆಂಗಳೂರು: ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ದರ್ಶನ್ ಅವರನ್ನು ರಿಲೀಸ್ ಮಾಡಿಸಲು ವಿಜಯಲಕ್ಷ್ಮೀ ಸಾಕಷ್ಟು ಹೋರಾಟ ಮಾಡುತ್ತಿದ್ದಾರೆ. ಇದರ ನಡುವೆಯೇ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಆಶ್ಚರ್ಯಕರ ಘಟನೆಯಾಗಿತ್ತು. ಇದೀಗ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ಕುತೂಹಲಕಾರಿ ಬೆಳವಣಿಗೆಗೆ ಸಾಕ್ಷಿಯಾಗಿತ್ತು.

ಈ ಬಗ್ಗೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆಯೇ ವಿಜಯಲಕ್ಷ್ಮೀ ಅವರು ನನ್ನ ಭೇಟಿ ಮಾಡುವುದಕ್ಕೆ ಬಂದಿದ್ದರು. ಆದರೆ ನಾನು ಭೇಟಿ ಮಾಡಲು ಒಪ್ಪಿರಲಿಲ್ಲ. ಇಂದು ಮನೆಯಲ್ಲಿ ಭೇಟಿಯಾಗುವಂತೆ ಹೇಳಿದ್ದೆ. ಈ ಹಿಂದೆ ದರ್ಶನ್ ಅವರ ಮಗನಿಗೆ ನನ್ನ ಸ್ಕೂಲ್ ನಲ್ಲಿ ಸೀಟ್ ಕೊಟ್ಟಿದ್ದೆ. ಈಗ ಮತ್ತೆ ನಮ್ಮ ಸ್ಕೂಲ್ ನಲ್ಲಿ ಸೇರಿಸಿಕೊಡಿ ಎಂದು ಮನವಿ ಮಾಡಲು ಬಂದಿದ್ದರು‌. ಪ್ರಿನ್ಸಿಪಾಲ್ ಗೆ ಹೇಳ್ತೀನಿ ಎಂದಿದ್ದೇನೆ. ಮಗನ ಶಿಕ್ಷಣದ ಬಗ್ಗೆ ಅವರಿಗೆ ಕಾಳಜಿ ಇದೆ.

ನಮ್ಮ ಸ್ಕೂಲ್ ನಲ್ಲಿ ಮಕ್ಕಳ ವರ್ತನೆ ಬಗ್ಗೆ ಪೇರೇಂಟ್ಸ್ ಗಮನಕ್ಕೆ ತರುತ್ತೇವೆ. ಹಾಗೇ ಈ ಹಿಂದೆ ದರ್ಶನ್ ಅವರನ್ನು ಕರೆಸಿದ್ದೆವು. ಮನೆ ಎದುರಿನ ಶಾಲೆಗೆ ಹೋದ್ರೆ ಹೋಗ್ತಾ ಬರ್ತಾ ಇರಬಹುದು ಎಂದು ಕೇಳಿದ್ದಾರೆ. ನಮಗೆ ಮಕ್ಕಳ ವಿಚಾರ ದೊಡ್ಡದು. ಸರಿ ಸಹಾಯ ಮಾಡ್ತೀನಿ ಎಂದು ಹೇಳಿದ್ದಾನೆ ಎಂದಿದ್ದಾರೆ.

ಇದೇ ವೇಳೆ ದರ್ಶನ್ ಬಗ್ಗೆ ಕೇಳಿದಾಗ, ನಿನ್ನೆ ನಮ್ಮ ಕ್ಷೇತ್ರದ ಹುಡುಗರು ಬಾಸ್ ಬಾಸ್ ಅಂತ ಗಲಾಟೆ ಮಾಡುತ್ತಿದ್ದರು. ಯಾವ ಬಾಸ್ ನಂಗೆ ಗೊತ್ತಿಲ್ಲ. ಮಾಧ್ಯಮಗಳಲ್ಲಿ ಏನು ಬರ್ತಿದೆ ಎಂಬುದನ್ನು ನೋಡುವುದಕ್ಕೆ ಸಮಯ ಇಲ್ಲ. ಒಂದೊಂದು ಮಾಧ್ಯಮದಲ್ಲಿ ಒಂದೊಂದು ರೀತಿ ಬರುತ್ತಿದೆ. ಪೊಲೀಸ್ ತನಿಖೆಯಲ್ಲಿ ಮಧ್ಯ ಪ್ರವೇಶ ಮಾಡಲು ಸಾಧ್ಯವಿಲ್ಲ. ನಾನು ಗೃಹ ಸಚಿವನು ಅಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...