Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಜಯಪುರ ಗೋದಾಮು ದುರಂತ : 6 ಮೃತದೇಹ ಪತ್ತೆ.. ಹೆಚ್ಚಿದ ಆತಂಕ..!

Facebook
Twitter
Telegram
WhatsApp

ವಿಜಯಪುರ: ಕೈಗಾರಿಕ ಪ್ರದೇಶದಲ್ಲಿದ್ದ ಫುಡ್ಸ್ ಗೋದಾಮಿನಲ್ಲಿ ಸಂಗ್ರಹಿಸಿದ್ದ ಜೋಳದ ರಾಶಿ ಕಾರ್ಮಿಕರ ಮೇಲೆ ಸುರಿದ ಪರಿಣಾಮ ಸಂಭವಿಸಿದ ಅವಘಡದಲ್ಲಿ ಸಾವು ನೋವು ಹೆಚ್ಚಾಗಿದೆ. ಈಗಾಗಲೇ ಆರು ಮೃತದೇಹಗಳನ್ನು ಹೊರಗೆ ತೆಗೆದಿದ್ದು, ಇನ್ನೂ ಹಲವರು ದುರಂಯದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಎಸ್ಡಿಆರ್ಎಫ್ ಪಡೆ ಕಾರ್ಯಾಚತಣೆಯಲ್ಲಿ ತೊಡಗಿದ್ದು, ನಾಪತ್ತೆಯಾಗಿರುವವರನ್ನು ಹುಡುಕುವ ಪ್ರಯತ್ನ ನಡೆಸುತ್ತಿದೆ. ಆರು ಮೃತದೇಹವನ್ನು ತೆಗೆಯಲಾಗಿದ್ದು, ಇನ್ನೊಂದು ಮೃತದೇಹ ತೆಗೆಯಲು ಹರಸಾಹಸ ಪಡಲಾಗುತ್ತಿದೆ. ರಾಜೇಶ್ ಮುಖಿಯಾ (25), ರಾಮಬ್ರೀಜ್ ಮುಖಿಯಾ (29), ಶಂಭು ಮುಖಿಯಾ (26), ಕೃಷ್ಣಾ ಮುಖಿಯಾ (18) ಸೇರಿ ಒಟ್ಟು ಆರು ಕಾರ್ಮಿಕರ ಮೃತದೇಹವನ್ನು ಹೊರಗೆ ತೆಗೆಯಲಾಗಿದೆ. ಸ್ಥಳಕ್ಕೆ ಸಚಿವ ಎಂ ಬಿ ಪಾಟೀಲ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ, ಮಾಹಿತಿ ಪಡೆದುಕೊಂಡಿದ್ದಾರೆ.

ನಿನ್ನೆ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಮೆಕ್ಕೆಜೋಳ ಸಂಸ್ಕರಣ ಘಟಕದಲ್ಲಿ ಬಿಹಾರ ಮಿಉಲದವರೇ ಕೆಲಸ ಮಾಡುತ್ತಿದ್ದರು. ಈ ಘಟನೆಯಿಂದ ಅಲ್ಲಿ ಕೆಲಸ ಮಾಡುತ್ತಿದ್ದ ಉಳಿದ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತದೇಹ ಸಾಗಿಸಲು ಹೋದಾಗ ಪೊಲೀಸರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಕಾರ್ಮಿಕರು ಚದುರಿಸುವಷ್ಟರಲ್ಲಿ ಪೊಲೀಸರು ಸುಸ್ತಾಗಿ ಹೋಗಿದ್ದಾರೆ. ಈ ಘಟನೆ ಬಗ್ಗೆ ಮಾತನಾಡಿರುವ ಸಚಿವ ಎಂ ಬಿ ಪಾಟೀಲ್, ಇದೊಂದು ಅತ್ಯಂತ ಭೀಕರ ದುರಂತ. ಬೇರೆ ರಾಜ್ಯದಿಂದ ಬಂದು ಇಲ್ಲಿ ಕೆಲಸ ಮಾಡುತ್ತಿದ್ದರು. ರಕ್ಷಣೆಗೆ ಮೊದಲ ಆದ್ಯತೆ ನೀಡುತ್ತಿದ್ದೇವೆ. ಪೊಲೀಸ್ ತನಿಖೆಯ ನಂತರ ಘಟನೆಯ ವಿವರ ನೀಡಲಾಗುವುದು. ಮೃತದೇಹಗಳನ್ನು ಅವರ ಮನೆಗಳಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!