Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜಯವಾಣಿ ಸ್ಥಾನಿಕ ಸಂಪಾದಕ ನವೀನ್‌ ಸೇರಿ 6 ಮಂದಿ ಗಣ್ಯರಿಗೆ “ಗೌರವ ಶ್ರೀ ರಕ್ಷೆ” ಪ್ರಶಸ್ತಿ

---Advertisement---

ಸುದ್ದಿಒನ್, ದಾವಣಗೆರೆ, ಆ.14: ಇದೇ ಆಗಸ್ಟ್ 17 ರಂದು ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ಹಾಲಕೆರೆ ಶ್ರೀ ಅನ್ನದಾನೀಶ್ವರ ಶಾಖಾ ಮಠದಲ್ಲಿ ಲಿಂ. ಶ್ರೀ ಗುರು ಅನ್ನದಾನ ಮಹಾಸ್ವಾಮಿಗಳವರ 49ನೇ ಪುಣ್ಯಾರಾಧನೆ , ಲಿಂ|| ಡಾ. ಅಭಿನವ ಅನ್ನದಾನ ಮಹಾಸ್ವಾಮಿಗಳವರ ನಾಲ್ಕನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಅನ್ನದಾನೀಶ್ವರ ಮಠದ ಸಾರ್ವಜನಿಕ ಸೇವಾನ್ಯಾಸ್ ಟ್ರಸ್ಟಿನ ಸಂಘಟನಾ ಕಾರ್ಯದರ್ಶಿಗಳಾದ  ಎಸ್ ಓಂಕಾರಪ್ಪ ತಿಳಿಸಿದರು.

ಅವರು ಇಂದು ಪತ್ರಕರ್ತರೊಂದಿಗೆ ಮಾತನಾಡುತ್ತಾ ಇದೇ ಸಂದರ್ಭದಲ್ಲಿ 501 ಮುತ್ತೈದೆ ಮಹಿಳೆಯರಿಗೆ ಉಡಿ ತುಂಬುವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಜಗದ್ಗುರು ಶ್ರೀ ಮ ನಿ ಪ್ರ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ನಾಡು ನುಡಿಗೆ ಸೇವೆ ಸಲ್ಲಿಸುತ್ತಿರುವ 6 ಜನ ಗಣ್ಯರಿಗೆ ಗೌರವ ಶ್ರೀರಕ್ಷೆ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮಗಳ ಸಮಾರಂಭದ ನೇತೃತ್ವವನ್ನು ಆವರಗೊಳ್ಳ ಪುರವರ್ಗ ಮಠದ ಷ . ಬ್ರ. ಶ್ರೀ ಓಂಕಾರ ಶಿವಾಚಾರ್ಯ ಮಹಾಸ್ವಾಮಿಗಳವರು ವಹಿಸುವರು ಎಂದರು.
ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪನವರು ಕಾರ್ಯಕ್ರಮ ಉದ್ಘಾಟಿಸಲಿದ್ದು , ಸಚಿವ ಎಸ್. ಎಸ್.ಮಲ್ಲಿಕಾರ್ಜುನ ರವರು ಉಭಯ ಜಗದ್ಗುರುಗಳವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಅರ್ಪಿಸುವರು ಎಂದು ನುಡಿದರು. ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ. ಎ ಹೆಚ್. ಶಿವಯೋಗಿ ಸ್ವಾಮಿ. ಜಿಲ್ಲಾಧಿಕಾರಿ ಜಿ ಎಂ ಗಂಗಾಧರಸ್ವಾಮಿ ರವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಉಭಯ ಜಗದ್ಗುರುಗಳವರ ಮತ್ತು ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಕುರಿತು ಮಹಾಂತೇಶ್ ಶಾಸ್ತೀ ಹಿರೇಮಠ ಕಲ್ಲೂರು ಇವರು ಉಪನ್ಯಾಸ ನೀಡಲಿದ್ದಾರೆಂದು ತಿಳಿಸಿ , ಪ್ರತಿ ವರ್ಷದಂತೆ ನಡೆಯುವ ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು ಆಗಮಿಸಿ ಯಶಸ್ವಿಗೊಳಿಸುವುದರ ಮೂಲಕ ಪ್ರಸಾದ ಸ್ವೀಕರಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ.
“ಇಂದಿನ ಸುದ್ದಿ ಸಂಸ್ಥಾಪಕ ಸಂಪಾದಕ ಪತ್ರಿಕೋದ್ಯಮ ಸಿರಿ ಲಿಂ|| ವೀರಪ್ಪ ಎಂ ಭಾವಿ,” ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಕ್ಕಿವರ್ತಕ ಎಸ್ ಜಿ ಉಳುವಯ್ಯ ಇವರಿಗೆ ವಾಣಿಜ್ಯ ಸಿರಿ , ಧೂಡಾ ಸದಸ್ಯೆ ಶ್ರೀಮತಿ ವಾಣಿ ಬಕ್ಕೇಶ್ ಇವರಿಗೆ ಕಾಯಕ ಸೌರಭ , ವಿಜಯವಾಣಿ ಸ್ಥಾನಿಕ ಸಂಪಾದಕ ಎಂ ಬಿ ನವೀನ್‌ರವರಿಗೆ ಪತ್ರಿಕೋದ್ಯಮ ಸಿರಿ, ಟ್ರಸ್ಟಿನ ಹಿರಿಯ ಸದಸ್ಯ ನಾಗೂರು ಆದಪ್ಪ ಹುಚನೂರು ಇವರಿಗೆ ಕಾಯಕ ಯೋಗಿ, ಎಸ್ ನಾಗರಾಜ ಮಳಗಿ ಯರಗಲ್ ಇವರಿಗೆ ಸಮಾಜ ಸೇವಾ ರತ್ನ ಮತ್ತು ಲಿಂಗೇಶ್ವರ ಫ್ಲವರ್ ಸ್ಟಾಲ್ ಮಾಲಿಕರಾದ ಎ ವಿ ರಮೇಶ್ ಇವರಿಗೆ ಕಾಯಕ ಜೀವಿ ಪ್ರಶಸ್ತಿ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು ಎಂದರು.

 

1986 ರಲ್ಲಿ ಶ್ರೀಮಠ ದಾವಣಗೆರೆಯಲ್ಲಿ ಸ್ವಂತ ಕಟ್ಟಡ ಹೊಂದಿದ್ದು ಅನೇಕ ಸಾರ್ವಜನಿಕ ಸಾಮಾಜಿಕ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಸಮಾರಂಭವನ್ನು ನಡೆಸಿಕೊಂಡು ಬರುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಎನ್. ಅಡಿವೆಪ್ಪ , ಸಂಘಟನಾ ಕಾರ್ಯದರ್ಶಿಗಳಾದ ಎಸ್ ಜಿ ಉಳುವಯ್ಯ, ಸಹಕಾರ್ಯದರ್ಶಿ ನಾಗರಾಜ್ ಎಸ್ ಮಳಗಿ  ಯರಗಲ್, ಇಂದಿನಸುದ್ದಿ ಸಂಪಾದಕ ಅನಿಲ್ ಕುಮಾರ್ ವಿ ಭಾವಿ . ಉಪಸ್ಥಿತರಿದ್ದರು .

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment