Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ : ಹೊಸ ಕಿರಣವಾಗಿ ಹೊರಹೊಮ್ಮಲಿ ಎಂದು ಹಾರೈಸಿದ ಬಿವೈ ರಾಘವೇಂದ್ರ

---Advertisement---

ಬೆಂಗಳೂರು : ಬಿಜೆಪಿ ಕಡೆಗೂ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಯಡಿಯೂರಪ್ಪ ಅವರ ಆಸೆಯಂತೆ ತಮ್ಮ ಪುತ್ರನಿಗೆ ಆ ಸ್ಥಾನವನ್ನು ನೀಡಿದ್ದಾರೆ. ಬಿವೈ ವಿಜಯೇಂದ್ರ ಅವರಿಗೆ ಬಿಜೆಪಿಯ ನಾಯಕರು, ಮುಖಂಡರು, ಆತ್ಮೀಯರು, ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಶ್ ಮಾಡುತ್ತಿದ್ದಾರೆ.

ಇದೀಗ ತಮ್ಮನಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದ್ದಕ್ಕೆ ಬಿವೈ ರಾಘವೇಂದ್ರ ಅವರು ಶುಭ ಹಾರೈಸಿದ್ದಾರೆ. ‘ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಶ್ರೀ ಬಿ ವೈ ವಿಜಯೇಂದ್ರ ಅವರಿಗೆ ಹಾರ್ದಿಕ ಶುಭಾಶಯಗಳು. ಹಿರಿಯರ ಆಶೀರ್ವಾದ ಹಾಗೂ ಕಿರಿಯರ ಬೆಂಬಲದೊಂದಿಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಮುನ್ನಡೆಸುತ್ತಾರೆ ಮತ್ತು ಮಾಜಿ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರು, ದಿ. ಶ್ರೀ ಅನಂತಕುಮಾರ್ ಅವರೇ ಮುಂತಾದ ನಾಯಕರುಗಳ ದಾರಿಯಲ್ಲಿ ನಡೆಯುತ್ತಾರೆ ಅನ್ನುವ ಭರವಸೆ ನನಗಿದೆ.

ಅವರ ನಾಯಕತ್ವದಲ್ಲಿ ಪಕ್ಷ ಹೊಸ ಚೈತನ್ಯದೊಂದಿಗೆ ಬೆಳೆಯಲಿ, ರಾಜ್ಯವನ್ನು ಆವರಿಸಿಕೊಂಡಿರುವ ಕಾಂಗ್ರೆಸ್ ದುರಾಡಳಿತದ ಕಾರ್ಮೋಡದ ನಡುವೆ ಭರವಸೆಯ ಒಂದು ಹೊಸ ಕಿರಣವಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.

ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್ ಈ ನಿರ್ಧಾರಕ್ಕೆ ಬಂದಿದೆ. ಲೋಕಸಭಾ ಚುನಾವಣೆಯಲ್ಲಿ, ವಿಜಯೇಂದ್ರ ಅವರ ನೇತೃತ್ವದಲ್ಲಿ ಗೆಲ್ಲುವ ಸ್ಥಾನಗಳ ಮೇಲೆ ಭರವಸೆ ನಿಲ್ಲುತ್ತದೆ. ರಾಜ್ಯದಲ್ಲಿ ಬಿಎಸ್ವೈಗಿರುವ ಹೆಸರು, ಗೌರವ ಎಲ್ಲರಿಗೂ ಗೊತ್ತಿದೆ. ಅವರ ಮಗನ ಮೇಲೂ ರಾಜ್ಯದ ಜನತೆಗೆ ಅಪಾರ ಅಭಿಮಾನ ಇದೆ. ಹೀಗಾಗಿ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment