Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರಿನಿಂದ ವಿಜಯೇಂದ್ರ ಸ್ಪರ್ಧಿಸುತ್ತಾರಾ..? ಏನಿತ್ತು ವಿಜಯೇಂದ್ರ ಅವರ ರಿಯಾಕ್ಷನ್..?

Facebook
Twitter
Telegram
WhatsApp

ತುಮಕೂರು: ಜಿಲ್ಲೆಯ ಗುಬ್ಬಿಯಿಂದ ಈ ಬಾರಿ ವಿಜಯೇಂದ್ರ ಅವರು ಸ್ಪರ್ಧಿಸುತ್ತಾರೆ ಎಂಬ ಮಾತಿದೆ ಎಂದಾಗ ಬಿ ವೈ ವಿಜಯೇಂದ್ರ ಅವರು, ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತೆ. ಸದ್ಯಕ್ಕಂತು ಕೆ ಆರ್ ಪೇಟೆ ಉಪಚುನಾವಣೆಯಲ್ಲಿ ಮಂಡ್ಯದಲ್ಲಿ ಕೆಲಸ ಮಾಡಿದ್ದೆ. ಶಿರಾ ಉಪಚುನಾವಣೆ ಬಂದಾಗ ಈ ಭಾಗದಲ್ಲಿ ಕೆಲಸ ಮಾಡಿದ್ದೆ. ನಂಗೆ ಸಂತೋಷ ಮತ್ತು ಹೆಮ್ಮೆ ಇರುವುದು ಯಾವುದೇ ಕ್ಷೇತ್ರದಲ್ಲಿ ಹೋಗಿ ಕೆಲಸ ಮಾಡಿದರು ಕೂಡ ನಮ್ಮ ಕಾರ್ಯಕರ್ತರು ಜೊತೆ ಜೊತೆಗೆ ಇರುತ್ತಾರೆ.

ತುಮಕೂರಿನ ಮೇಲೆ ಅತಿ ಹೆಚ್ಚು ಪ್ರೀತಿ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಇದು ನಿನ್ನೆ ಮೊನ್ನೆಯದ್ದಲ್ಲ. ನಾವೂ ರಾಜಕಾರಣಕ್ಕೆ ಬರುವುದಕ್ಕೂ ಮುಂಚೆಯಿಂದಲೂ ತುಮಕೂರಿನ ಬಗ್ಗೆ ಪ್ರೀತಿಯಿದೆ. ನಿಮಗೆ ಗೊತ್ತಿದೆ ಬಿಎಸ್ ಯಡಿಯೂರಪ್ಪ ಅವರಿಗೆ ಸಿದ್ದಗಂಗಾ ಮಠಕ್ಕೆ, ತುಮಕೂರಿಗೆ ಅವಿನಾಭಾವ ಸಂಬಂಧ ಮುಂಚೆಯಿಂದ ಇದೆ. ನನಗೂ ಕೂಡ ಅಂದಿನಿಂದ ಬಂದಿದೆ. ಸ್ವಾಮೀಜಿಗಳ ಜನ್ಮದಿನವನ್ನು ನೆಪವಾಗಿಟ್ಟುಕೊಂಡು ರಾಜಕೀಯ ಮಾಡುವ ಅವಶ್ಯಕತೆಯಿಲ್ಲ. ಹೆಮ್ಮೆಯಿದೆ ನನಗೆ. ಇದು ಶ್ರೀಗಳ ಆಶೀರ್ವಾದಿಂದ ಜನ್ಮದಿನ ಅದ್ಧೂರಿಯಾಗಿ ನಡೆದಿರುವುದು ಖುಷಿ ಇದೆ ಎಂದಿದ್ದಾರೆ.

ಇನ್ನು ಸಂಪುಟದಲ್ಲಿ ಸ್ಥಾನದ ಬಗ್ಗೆ ಮಾತನಾಡಿ, ಈ ವಿಚಾರವಾಗಿ ಮುಖ್ಯಮಂತ್ರಿಗಳು ನಿನ್ನೆ ಕೇಂದ್ರ ಸಚಿವರ ಬಳಿ ಸವಿಸ್ತಾರವಾಗಿ ಚರ್ಚೆ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾನು ಯಾವುದೇ ರೀತಿಯ ಆಕಾಂಕ್ಷಿಯಲ್ಲ. ನಾನು ಹಲವಾರು ಬಾರಿ ಹೇಳಿದ್ದೇನೆ. ಯಾವ ಜವಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕು ಎಂಬುದು ಕೇಂದ್ರ ನಾಯಕರ ಅಪೇಕ್ಷೆ ಇದೆ ಅದನ್ನು ಕೇಂದ್ರ ಸಚಿವರು ನಿರ್ಧಾರ ಮಾಡುತ್ತಾರೆ. ಪಕ್ಷ ಮತ್ತು ಪಕ್ಷದ ನಾಯಕರು ಏನೇ ಜವಬ್ದಾರಿ ಕೊಟ್ಟರು ಅದನ್ನು ಯಶಸ್ವಿಯಾವಿ ನಿರ್ವಹಿಸುತ್ತಿದ್ದೇನೆ, ನಿರ್ವಹಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

error: Content is protected !!