Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

---Advertisement---

 

 

ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಮೈಸೂರಿಗೆ ಬಂದಿಳಿದಿದ್ದಾರೆ. ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ವಿಹಯೇಂದ್ರ ಅವರನ್ನು ನೋಡಲು ಮಾಜಿ ಸಂಸದ ಪ್ರತಾಪ್ ಸಿಂಹ ಓಡೋಡಿ ಬಂದಿದ್ದಾರೆ. ಇದು ಎಲ್ಲರಿಗೂ ಶಾಕ್ ಎನಿಸಿದೆ. ಪ್ರತಾಪ್‌ ಸಿಂಹ ಯಾರ ಬಣದವರು ಎಂಬ ಪ್ರಶ್ನೆ ಕೇಳುವಂತೆ ಆಗಿದೆ.

ಯಾಕಂದ್ರೆ ಪ್ರತಾಪ್ ಸಿಂಹ ಅವರು ಇತ್ತೀಚೆಗಷ್ಟೇ ಯತ್ನಾಳ್ ಬಣದಲ್ಲಿ ಹೆಚ್ಚಾಗಿ ಗುರುತಿಸಿಕೊಂಡರು. ಯತ್ನಾಳ್ ಬಣ ಹೇಗಾದ್ರೂ ಮಾಡಿ ವಿಜಯೇಂದ್ರ ಅವರನ್ನ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು, ನಮ್ಮ ಬಣದ ಯಾರಾದರೊಬ್ಬರು ರಾಜ್ಯಾಧ್ಯಕ್ಷರಾಗಬೇಕು ಎಂದೇ ಯೋಜನೆ ರೂಪಿಸಿವೆ. ಹೀಗಾಗಿ ಯತ್ನಾಳ್ ಬಣ ಆಗಾಗ ಸಭೆಗಳನ್ನು ನಡೆಸಿದೆ. ಇದೇ ಪ್ರತಾಪ್ ಸಿಂಹ ಅವರು, ಯತ್ನಾಳ್ ಬಣ ಸೇರಿದ ಮೇಲೆ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಅದು ನೇರವಾಗಿಯೇ ಆಕ್ರೋಶ ಹೊರ ಹಾಕಿದ್ದರು.

ಇದೀಗ ಮೈಸೂರಿಗೆ ಪ್ರತಿಭಟನೆಗಾಗಿ ಬಂದ ವಿಜಯೇಂದ್ರ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ವಿಜಯೇಂದ್ರ ಅವರು ರೇಗಿಸಿದ್ದಾರೆ. ವೈಟ್ ಶರ್ಟ್ ಬಿಟ್ಟು ಪ್ರತಾಪ್ ಸಿಂಹ ಅವರು ಟೀ ಶರ್ಟ್ ಹಾಕಿಬಿಟ್ಟಿದ್ದಾರೆ. ನೋಡಿ ಇಷ್ಟು ಸಮಯ ಮಾಧ್ಯಮದವರು ಬಂದಿರಲಿಲ್ಲ. ನೀವೂ ಬಂದೊಡನೆ ಮಾಧ್ಯಮದವರೆಲ್ಲಾ ಓಡಿ ಬಂದಿದ್ದಾರೆ ಎಂದಿದ್ದಾರೆ. ಇನ್ನು ಪ್ರತಾಪ್ ಸಿಂಹ ನಡೆಯನ್ನು ಯತ್ನಾಳ್ ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ನೋಡಬೇಕಿದೆ. ವಿಜಯೇಂದ್ರ ಹಾಗೂ ಪ್ರತಾಪ್ ಸಿಂಹ ಭೇಟಿ ಬಗ್ಗೆ ಯಾವ ರೀತಿ ರಿಯಾಕ್ಟ್ ಮಾಡ್ತಾರೆ ನೋಡಬೇಕಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...