Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನರೇಂದ್ರ ಮೋದಿ ಅವರಿಗಾಗಿ ದೈವದ ಮೊರೆ ಹೋದ ವಿಜಯೇಂದ್ರ..!

---Advertisement---

 

ಮಂಗಳೂರು; ಪ್ರಧಾನಿ ನರೇಂದ್ರ ಮೋದಿ ಅವರ ಒಳಿತಿಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೈವದ ಮೊರೆ ಹೋಗಿದ್ದಾರೆ. “ಕರಾವಳಿಯ ದೈವಾರಾಧನೆಯ ಪರಂಪರೆ ನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹೊನ್ನ ಕಲಶವಿದ್ದಂತೆ” ಎಂದಿದ್ದಾರೆ.

 

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೇವಸ್ಥಾನ, ಶ್ರೀ ಗುಳಿಗ ದೈವ ಹಾಗೂ ಕೊರಗಜ್ಜ ದೇವಸ್ಥಾನದಲ್ಲಿ ಆಯೋಜಿಸಿದ್ದ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳಿಗೆ ತಂಬಿಲ ಸೇವಾ ಕಾರ್ಯದಲ್ಲಿ ಭಾಗವಹಿಸಿ ಗುಳಿಗ ದೈವದ ಆಶೀರ್ವಾದ ಪಡೆಯಲಾಯಿತು.

ತುಳುನಾಡಿನ ಆರಾಧನಾ ಪರಂಪರೆಯಲ್ಲಿ ದೈವದ ಆರಾಧನೆಗೆ ಪರಮಪವಿತ್ರ ಆಚರಣೆಯಲ್ಲಿ ರಾಷ್ಟ್ರದ ಅಭಿವೃದ್ಧಿ ಹಾಗೂ ಸುಭದ್ರತೆಗಾಗಿ ಮೂರನೇ ಬಾರಿ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಯವರು ಪ್ರಧಾನಿಗಳಾಗಿ ಆಯ್ಕೆಯಾಗಲೆಂದು ನಮ್ಮ ಕಾರ್ಯಕರ್ತರು ಮಾಡಿಕೊಂಡಿದ್ದ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳಿಗೆ ತುಂಬಿಲಸೇವೆ ಸಲ್ಲಿಸಿ ದೈವದ ಕೃಪೆಗೆ ಪಾತ್ರರಾದೆವು. ಶ್ರೀ ದೈವದ ಪ್ರಸಾದವನ್ನು ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರಿಗೆ ತಲಿಪಿಸಲಿದ್ದೇವೆ.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಎಸ್.ಅಂಗಾರ, ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಶ್ರೀ Harish Poonja , ಸಂಸದರಾದ ಶ್ರೀ Captain Brijesh Chowta , ಶಾಸಕರಾದ ಕು ಭಾಗೀರಥಿ ಮರುಳ್ಯ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕಂಪಲ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮಂಡಲ ಮತ್ತು ಶಕ್ತಿಕೇಂದ್ರ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment