Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಡಿಕೇರಿಯಲ್ಲಿ ವಿಜಯೇಂದ್ರ ಕಾರ್ಯಕ್ರಮ : ಲಕ್ಷಾಂತರ ರೂಪಾಯಿ ಕಳವು..!

Facebook
Twitter
Telegram
WhatsApp

ಮಡಿಕೇರಿ: ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯ ಶುರುವಾಗಿದೆ. ರಾಜಕಾರಣಿಗಳು ಕಾರ್ಯಕ್ರಮಗಳನ್ನು ಮಾಡಲು ಶುರು ಮಾಡಿದ್ದಾರೆ. ರಾಜಕಾರಣಿಗಳ ಕಾರ್ಯಕ್ರಮ ಎಂದರೆ ಅಲ್ಲಿ ಸಾವಿರಾರು ಜನರು ಸೇರುತ್ತಾರೆ. ಸಮಾವೇಶ, ರ್ಯಾಲಿಗಳನ್ನು ಮಾಡಿದಾಗ ಜನರನ್ನು ಸೇರಿಸುವ ಟಾರ್ಗೆಟ್ ಸ್ಥಳೀಯ ನಾಯಕರಿಗೆ ಇರುತ್ತದೆ. ಹೀಗಾಗಿಯೇ ಹೆಚ್ಚು ಜನ ಸೇರುತ್ತಾರೆ. ಆದರೆ ಇಂದು ಮಡಿಕೇರಿಯಲ್ಲಿ ವಿಜಯೇಂದ್ರ ಅವರ ಕಾರ್ಯಕ್ರಮಕ್ಕೆ ಸೇರಿದ್ದ ಜನರ ನಡುವೆ ಕಳ್ಳನೊಬ್ಬ ಸೇರಿಕೊಂಡೊದ್ದಾನೆ. ಸಮಾವೇಶವನ್ನೇ ಬಂಡವಾಳ ಮಾಡಿಕೊಂಡು ಲಕ್ಷ ಲಕ್ಷ ದೋಚಿದ್ದಾನೆ.

ಮಡಿಕೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸೇರಿದ ಕಾರ್ಯಕ್ರಮದಲ್ಲಿ ಹಲವು ಶಾಸಕರು ಸೇರಿದ್ದರು. ಇದೇ ಕಾರ್ಯಕ್ರಮದಲ್ಲಿ ಶಾಸಕರ ಜೇಬಿಗೇನೆ ಕತ್ತರಿ ಹಾಕಿದ್ದಾರೆ. ಮಾಜಿ ಶಾಸಕ ಅಪ್ಪಚ್ಚು ರಂಜನ್ ಸೇರಿ ಹಲವು ನಾಯಕರ ಜೇಬಿಗೆ ಕತ್ತರಿ ಬಿದ್ದಿದೆ. ಅದರಲ್ಲಿ 20 ಸಾವಿರ ರೂಪಾಯಿಯನ್ನು ಜೇಬಿನಿಂದ ಎಗರಿಸಿದ್ದಾರೆ. ಅಷ್ಟೇ ಅಲ್ಲ ಕೆ ಜಿ ಬೋಪಯ್ಯ ಅವರ ಜೇಬಿನಿಂದಾನು 25 ಸಾವಿರ ರೂಪಾಯಿ ಎಗರಿಸಿದ್ದಾರೆ.

ಕಾರ್ಯಕ್ರಮದಲ್ಲಿ ನೂರಾರು ಜನ ಭಾಗಿಯಾಗಿದ್ದರು. ಹೀಗಾಗಿ ಕಳ್ಳರಿಗೆ ಕದಿಯುವ ದಾರಿ ಸುಲಭವಾಗಿದೆ. ‘ಕಾರ್ಯಕ್ರಮದಲ್ಲಿ ನನ್ನ ಜೇಬಿನಿಂದ ಪರ್ಸ್ ಕಳ್ಳತನ ಮಾಡಲಾಗಿದೆ. ಅದರಲ್ಲಿ ಸುಮಾರು 20 ಸಾವಿರ ರೂಪಾಯಿ ಇತ್ತು. ಹೊಇದರೆ ಹೋಗಲಿ, ಆದರೆ ಕಾರ್ಡ್ ಮತ್ತು ದಾಖಲೆಗಳು ಸಿಕ್ಕರೆ ಸಾಕು ಎಂದು ಮಾಜಿ ಶಾಸಕ ಅಪ್ಪಚ್ಚು ರಂಜು ಪ್ರತಿಕ್ರಿಯೆ ನೀಡಿದ್ದಾರೆ.

ರಾಜಕೀಯ ಕಾರ್ಯಕ್ರಮದಲ್ಲಿ ಕಳ್ಳತನವಾಗಿರುವುದು ಇದೇ ಮೊದಲೇನು ಅಲ್ಲ. ಈ ಮೊದಲು ಕೂಡ ಸಾಕಷ್ಟು ಕಳ್ಳತನಗಳು ನಡೆದಿವೆ. ಪರ್ಸ್ ಮಾತ್ರವಲ್ಲ ರಾಜಕೀಯ ಕಾರ್ಯಕ್ರಮದಲ್ಲಿ ಮೊಬೈಲ್ ಗಳನ್ನು ದೋಚಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!