Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಡಿಕೇರಿಯಲ್ಲಿ ವಿಜಯೇಂದ್ರ ಕಾರ್ಯಕ್ರಮ : ಲಕ್ಷಾಂತರ ರೂಪಾಯಿ ಕಳವು..!

---Advertisement---

ಮಡಿಕೇರಿ: ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯ ಶುರುವಾಗಿದೆ. ರಾಜಕಾರಣಿಗಳು ಕಾರ್ಯಕ್ರಮಗಳನ್ನು ಮಾಡಲು ಶುರು ಮಾಡಿದ್ದಾರೆ. ರಾಜಕಾರಣಿಗಳ ಕಾರ್ಯಕ್ರಮ ಎಂದರೆ ಅಲ್ಲಿ ಸಾವಿರಾರು ಜನರು ಸೇರುತ್ತಾರೆ. ಸಮಾವೇಶ, ರ್ಯಾಲಿಗಳನ್ನು ಮಾಡಿದಾಗ ಜನರನ್ನು ಸೇರಿಸುವ ಟಾರ್ಗೆಟ್ ಸ್ಥಳೀಯ ನಾಯಕರಿಗೆ ಇರುತ್ತದೆ. ಹೀಗಾಗಿಯೇ ಹೆಚ್ಚು ಜನ ಸೇರುತ್ತಾರೆ. ಆದರೆ ಇಂದು ಮಡಿಕೇರಿಯಲ್ಲಿ ವಿಜಯೇಂದ್ರ ಅವರ ಕಾರ್ಯಕ್ರಮಕ್ಕೆ ಸೇರಿದ್ದ ಜನರ ನಡುವೆ ಕಳ್ಳನೊಬ್ಬ ಸೇರಿಕೊಂಡೊದ್ದಾನೆ. ಸಮಾವೇಶವನ್ನೇ ಬಂಡವಾಳ ಮಾಡಿಕೊಂಡು ಲಕ್ಷ ಲಕ್ಷ ದೋಚಿದ್ದಾನೆ.

ಮಡಿಕೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸೇರಿದ ಕಾರ್ಯಕ್ರಮದಲ್ಲಿ ಹಲವು ಶಾಸಕರು ಸೇರಿದ್ದರು. ಇದೇ ಕಾರ್ಯಕ್ರಮದಲ್ಲಿ ಶಾಸಕರ ಜೇಬಿಗೇನೆ ಕತ್ತರಿ ಹಾಕಿದ್ದಾರೆ. ಮಾಜಿ ಶಾಸಕ ಅಪ್ಪಚ್ಚು ರಂಜನ್ ಸೇರಿ ಹಲವು ನಾಯಕರ ಜೇಬಿಗೆ ಕತ್ತರಿ ಬಿದ್ದಿದೆ. ಅದರಲ್ಲಿ 20 ಸಾವಿರ ರೂಪಾಯಿಯನ್ನು ಜೇಬಿನಿಂದ ಎಗರಿಸಿದ್ದಾರೆ. ಅಷ್ಟೇ ಅಲ್ಲ ಕೆ ಜಿ ಬೋಪಯ್ಯ ಅವರ ಜೇಬಿನಿಂದಾನು 25 ಸಾವಿರ ರೂಪಾಯಿ ಎಗರಿಸಿದ್ದಾರೆ.

ಕಾರ್ಯಕ್ರಮದಲ್ಲಿ ನೂರಾರು ಜನ ಭಾಗಿಯಾಗಿದ್ದರು. ಹೀಗಾಗಿ ಕಳ್ಳರಿಗೆ ಕದಿಯುವ ದಾರಿ ಸುಲಭವಾಗಿದೆ. ‘ಕಾರ್ಯಕ್ರಮದಲ್ಲಿ ನನ್ನ ಜೇಬಿನಿಂದ ಪರ್ಸ್ ಕಳ್ಳತನ ಮಾಡಲಾಗಿದೆ. ಅದರಲ್ಲಿ ಸುಮಾರು 20 ಸಾವಿರ ರೂಪಾಯಿ ಇತ್ತು. ಹೊಇದರೆ ಹೋಗಲಿ, ಆದರೆ ಕಾರ್ಡ್ ಮತ್ತು ದಾಖಲೆಗಳು ಸಿಕ್ಕರೆ ಸಾಕು ಎಂದು ಮಾಜಿ ಶಾಸಕ ಅಪ್ಪಚ್ಚು ರಂಜು ಪ್ರತಿಕ್ರಿಯೆ ನೀಡಿದ್ದಾರೆ.

ರಾಜಕೀಯ ಕಾರ್ಯಕ್ರಮದಲ್ಲಿ ಕಳ್ಳತನವಾಗಿರುವುದು ಇದೇ ಮೊದಲೇನು ಅಲ್ಲ. ಈ ಮೊದಲು ಕೂಡ ಸಾಕಷ್ಟು ಕಳ್ಳತನಗಳು ನಡೆದಿವೆ. ಪರ್ಸ್ ಮಾತ್ರವಲ್ಲ ರಾಜಕೀಯ ಕಾರ್ಯಕ್ರಮದಲ್ಲಿ ಮೊಬೈಲ್ ಗಳನ್ನು ದೋಚಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment