ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು ಬಿಜೆಪಿಯಿಂದ ಬೃಹತ್ ಹೋರಾಟ ನಡೆಯುತ್ತಿದೆ. ಸರ್ಕಾರದ ವಿರುದ್ಧ ಈ ಹೋರಾಟ ನಡೆಸುತ್ತಿದ್ದಾರೆ. ಹೋರಾಟದ ನಡುವೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಕ್ಕೆ ಯತ್ನಿಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಹೋರಾಟಗಾರರನ್ನು ತಡೆಯುವಲ್ಲಿ ಯಶಸ್ವಿಯಾದರು. ಬಿಜೆಪಿ ನಾಯಕರ ಈ ಹೋರಾಟಕ್ಕೆ ರೈತರು ಕೂಡ ಸಾಥ್ ನೀಡಿದರು.
ಈ ಬೃಹತ್ ಹೋರಾಟವನ್ನು ತಡೆಯುವ ಉದ್ದೇಶದಿಂದ ಪೊಲೀಸರು ಬಿಗಿ ಭದ್ರತೆಯನ್ನು ನೋಡಿಕೊಳ್ಳಲಾಗಿದೆ. ಪೊಲೀಸರು ಕೂಡ ಬ್ಯಾರಿಕೇಡ್ ಹಾಕಿ ಭದ್ರತೆಯನ್ನ ಮಾಡಲಾಗಿದೆ. ಇದೆ ವೇಳೆ ಬಿವೈ ವಿಜಯೇಂದ್ರ ಅವರು ರೈತರ ಪರ ಹೋರಾಟ ಮಾಡುತ್ತೇನೆ ಎಂದಿದ್ದಾರೆ. ರೈತರ ಹೋರಾಟ ಯಶಸ್ಸು ಆಗುವ ತನಕ ನಿದ್ದೆ ಮಾಡುವುದಿಲ್ಲ. ಅದೇ ರೀತಿ ನಾನು ರೈತರ ಪರ ನಿಲ್ಲುತ್ತೇನೆ. ರೈತರ ಪರ ಬಿಜೆಪಿ ಹೋರಾಟ ಮಾಡುತ್ತದೆ. ಯಡಿಯೂರಪ್ಪ ಅವರು ಕೂಡ ರೈತರ ಪರ ಇದೇ ರೀತಿ ಹೋರಾಟ ಮಾಡುತ್ತಾ ಇದ್ದರು ಎಂದಿದ್ದಾರೆ.
ಸಿದ್ದರಾಮಯ್ಯ ಅವರ ಹೇಳಿಕೆಗೂ ಕೌಂಟರ್ ನೀಡಿರುವ ವಿಜಯೇಂದ್ರ ಅವರು, ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ ಅಂತ ಸಿದ್ದರಾಮಯ್ಯ ನಾಟಕ ಮಾಡುತ್ತಿದ್ದಾರೆ. ಆದರೆ ಯಡಿಯೂರಪ್ಪ ನಾಟಕ ಮಾಡದೆ ತಕ್ಷಣವೇ ಮನೆ ಕಳೆದುಕೊಂಡು ರೈತರಿಗೆ ಐದು ಲಕ್ಷ ಪರಿಹಾರ ನೀಡಿದರು. ಇವರ ಯೋಗ್ಯತೆ ರೈತರ ಪರ ಯೋಜನೆ ಘೋಷಣೆ ಮಾಎಇಲ್ಲ. ಸಿದ್ದರಾಮಯ್ಯ 2.5 ವರ್ಷ ಸರ್ಕಾರದಲ್ಲಿ 2500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾವೂ ರೈತರಿಗೆ ನ್ಯಾಯ ಒದಗಿಸುವ ತನಕ ಹೋರಾಟ ಮುಂದುವರೆಸುತ್ತೇವೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











