Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜ್ಯೋತಿಷ್ಯ ಲೆಕ್ಕಾಚಾರಗಳ ಮಧ್ಯೆ ವಿಜಯ್ ಪ್ರಮಾಣವಚನ: ತಮಿಳುನಾಡು ಸರ್ಕಾರದ ಭವಿಷ್ಯ ಹೇಗೆ?

---Advertisement---

ಚೆನ್ನೈನಲ್ಲಿ ನಟ ವಿಜಯ್ ಅವರು ಮೇ 10ರಂದು ಬೆಳಿಗ್ಗೆ 10 ಗಂಟೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಪ್ರಮಾಣವಚನದ ಸಮಯ ಮತ್ತು ಸರ್ಕಾರದ ಭವಿಷ್ಯದ ಬಗ್ಗೆ ಇದೀಗ ರಾಜಕೀಯ ಹಾಗೂ ಜ್ಯೋತಿಷ್ಯ ವಲಯಗಳಲ್ಲಿ ಚರ್ಚೆಗಳು ಜೋರಾಗಿವೆ.ಮೊದಲಿನಿಂದಲೇ ಮಧ್ಯಾಹ್ನ ಕಾರ್ಯಕ್ರಮ ನಡೆಸುವ ಯೋಜನೆ ಇದ್ದರೂ, ಜ್ಯೋತಿಷಿಗಳ ಸಲಹೆ ಮೇರೆಗೆ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಿಗದಿಪಡಿಸಲಾಯಿತು ಎನ್ನಲಾಗಿದೆ. ಬೆಳಿಗ್ಗೆ 10.45ರವರೆಗೆ ಶುಭ ಸಮಯವಿದೆ ಎಂಬ ಲೆಕ್ಕಾಚಾರದ ಆಧಾರದಲ್ಲಿ ಪ್ರಮಾಣವಚನ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಜ್ಯೋತಿಷ್ಯ ವಿಶ್ಲೇಷಣೆ ನೀಡಿರುವ ಪ್ರಕಾಶ್ ಅಮ್ಮಣ್ಣಾಯ, ಸರ್ಕಾರದ ಭವಿಷ್ಯ ಸ್ಥಿರವಾಗಿರುವ ಸಾಧ್ಯತೆ ಕಡಿಮೆ ಎಂದು ಅಭಿಪ್ರಾಯಪಟ್ಟಿದ್ದಾರೆ. “ಆರು ತಿಂಗಳಿಂದ ಒಂದು ವರ್ಷದೊಳಗೆ ತಮಿಳುನಾಡಿನಲ್ಲಿ ಮತ್ತೆ ರಾಜಕೀಯ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ವಿಜಯ್ ಅವರಿಗೆ ಅಧಿಕಾರದಲ್ಲಿ ಹಲವು ಸವಾಲುಗಳು ಎದುರಾಗಬಹುದು” ಎಂದು ಅವರು ಹೇಳಿದ್ದಾರೆ.ಜ್ಯೋತಿಷ್ಯ ಲೆಕ್ಕಾಚಾರದಲ್ಲಿ ಲಗ್ನ, ಗುರುದೃಷ್ಟಿ ಹಾಗೂ ಬಾಧಕ ಸ್ಥಿತಿಗಳ ಕುರಿತು ಉಲ್ಲೇಖಿಸಿರುವ ಅವರು, ಸರ್ಕಾರಕ್ಕೆ ರಾಜಕೀಯ ಒತ್ತಡಗಳು ಎದುರಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಿದ್ದಾರೆ.

ಇನ್ನೊಂದೆಡೆ, ವಿಜಯ್ ನೇತೃತ್ವದ ಸರ್ಕಾರ ಮೈತ್ರಿ ಬೆಂಬಲದ ಮೇಲೆ ಅಧಿಕಾರಕ್ಕೆ ಬಂದಿದೆ. ಚುನಾವಣೆಯಲ್ಲಿ ಪಕ್ಷಕ್ಕೆ ಗಮನಾರ್ಹ ಗೆಲುವು ಸಿಕ್ಕಿದ್ದರೂ, ಸ್ವತಂತ್ರವಾಗಿ ಸರ್ಕಾರ ರಚಿಸಲು ಬೇಕಾದ ಪೂರ್ಣ ಬಹುಮತ ಲಭಿಸಿರಲಿಲ್ಲ. ಹೀಗಾಗಿ ಇತರೆ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಲಾಗಿದೆ.ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ತಮಿಳುನಾಡಿನ ರಾಜಕೀಯ ಬೆಳವಣಿಗೆಗಳು ಯಾವ ದಿಕ್ಕಿನಲ್ಲಿ ಸಾಗುತ್ತವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...