ಕೋಲಾರ: ಈಗಂತು ದೊಡ್ಡ ದೊಡ್ಡ ಸ್ಟಾರ್ ಸಿನಿಮಾಗಳಿಗೆ ಪೈರಸಿ ಕಾಟ ತಪ್ಪಿದ್ದಲ್ಲ. ಪೈರಸಿಯಿಂದಾಗಿ ನಿರ್ಮಾಪಕರು ನಷ್ಟ ಅನುಭವಿಸಿದಂತಾಗುತ್ತಿದೆ. ಇದೀಗ ವಿಕ್ರಾಂತ್ ರೋಣ ಸಿನಿಮಾಗೂ ಪೈರಸಿಯ ಭೂತ ಮೆಟ್ಟಿಕೊಂಡಿದೆ. ದೇಶಾದ್ಯಂತ ರಿಲೀಸ್ ಆಗಿ, ಯಶಸ್ವಿ ಪ್ರದರ್ಶನ ಕಾಣುತ್ತಿರುವ ವಿಕ್ರಾಂತ್ ರೋಣ ಪೈರಸಿಯ ಕಾಟಕ್ಕೆ ಸಿಲುಕಿದೆ.
ಅದರಲ್ಲೂ ಮಕ್ಕಳನ್ನು ಒಳ್ಳೆ ದಾರಿಯಲ್ಲಿ ನಡೆಸಬೇಕಾದ, ಉತ್ತಮ ಶಿಕ್ಷಣ ನೀಡಬೇಕಾದ ಶಿಕ್ಷಕರೇ ಪೈರಸಿ ಮಾಡಿ, ಮಕ್ಕಳಿಗೆ ಸಿನಿಮಾ ತೋರಿಸಿದ್ದಾರೆ. ಕೋಲಾರದ ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಾರ್ಡನ್ ವೆಂಕಟಸ್ವಾಮಿ ಹಾಗೂ ಪ್ರಿನ್ಸಿಪಾಲ್ ದೇವರಾಜ್ ಸೇರಿ ವಿಕ್ರಾಂತ್ ರೋಣ ಸಿನಿಮಾದ ಪೈರಸಿಯನ್ನು ಮಕ್ಕಳಿಗೆ ಸಾಮೂಹಿಕ ಪ್ರದರ್ಶನ ಮಾಡಿಸಿದ್ದಾರೆ.
ಈ ಸಂಬಂಧ ನಿರ್ಮಾಪಕ ಜಾಕ್ ಮಂಜು ಈಗಾಗಲೇ ಕೋಲಾರದ ಎಸ್ಪಿಗೆ ದೂರು ನೀಡಿದ್ದಾರೆ. ಶಿಕ್ಷಕರೇ ಇಲ್ಲಿ ಪೈರಸಿ ಸಿನಿಮಾ ತೋರಿಸಿದ್ದಾರೆ. ಮಕ್ಕಳಿಗೆ ಯಾವುದು ಸರಿ, ಯಾವುದು ತಪ್ಪು ಅಂತ ಹೇಳಿಕೊಡಬೇಕಾದ ಶಿಕ್ಷಕರೇ ಈ ರೀತಿ ಮಾಡಿದರೆ, ಮಕ್ಕಳು ಏನು ಕಲಿಯುತ್ತಾರೆ. ದಯವಿಟ್ಟು ಈ ರೀತಿಯ ತಪ್ಪು ಮಾಡಬೇಡಿ. ಪೈರಸಿ ಕುರಿತು ಪೊಲೀಸರಿಗೆ ದೂರು ನೀಡಿದ್ದೇನೆ ಎಂದಿದ್ದಾರೆ. ಇನ್ನು ಕಲಬಿರಗಿಯಲ್ಲಿಯೂ ವಿಕ್ರಾಂತ್ ರೋಣ ಸಿನಿಮಾ ಕೇಬಲ್ ಚಾನೆಲ್ ಒಂದರಲ್ಲಿ ಪ್ರಸಾರವಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…