Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಐಯ್ಯನಹಳ್ಳಿ ಕುರುಬರಹಟ್ಟಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ಗ್ರಾಮಸ್ಥರ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.13): ತಾಲ್ಲೂಕಿನ ಹಿರೇಗುಂಟನೂರು ಹೋಬಳಿ ಐಯ್ಯನಹಳ್ಳಿ ಕುರುಬರಹಟ್ಟಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಐಯ್ಯನಹಳ್ಳಿ ಕುರುಬರಹಟ್ಟಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು.

ಕೃಷ್ಣಮೂರ್ತಿ, ಅಂಗಡಿ ಪಾರ್ವತಮ್ಮನ ಮಗ ಮಂಜುನಾಥ, ತಿಪ್ಪೇಸ್ವಾಮಿ, ಅಂಜಿನಪ್ಪ, ಶಾರದಮ್ಮ, ಹುಚ್ಚಪ್ಪ, ಮಮತ, ತಿಪ್ಪಮ್ಮ, ಈಡಿಗರ ರುದ್ರಪ್ಪನ ಮಗಳು ರತ್ನಮ್ಮ, ಕಡ್ಲೆಪ್ಪರ ಕೆಂಚಪ್ಪ, ಚೌಡಮ್ಮ ಇವರುಗಳು ಅಂಗಡಿ ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ಗ್ರಾಮದಲ್ಲಿ ಕುಡುಕರ ಹಾವಳಿ ಜಾಸ್ತಿಯಾಗಿ ಎಲ್ಲೆಂದರಲ್ಲಿ ಮದ್ಯದ ಬಾಟಲಿಗಳನ್ನು ಎಸೆದು ಗಲಾಟೆ ಮಾಡುತ್ತಿದ್ದಾರೆ.

ವಿದ್ಯಾರ್ಥಿಗಳು, ವೃದ್ದರು, ಮಹಿಳೆಯರು ತೊಂದರೆ ಅನುಭವಿಸುವಂತಾಗಿದೆ. ಕೂಲಿ ಮಾಡಿ ಸಿಗುವ ಹಣದಲ್ಲಿ ಮದ್ಯ ಸೇವಿಸಿ ಬರುವ ಪುರುಷರು ಗ್ರಾಮದಲ್ಲಿ ಅಶಾಂತಿಯುಂಟು ಮಾಡುತ್ತಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಮದ್ಯ ಮಾರುವವರ ವಿರುದ್ದ ಕ್ರಮ ಕೈಗೊಂಡು ಐಯ್ಯನಹಳ್ಳಿ ಕುರುಬರಹಟ್ಟಿ ಗ್ರಾಮವನ್ನು ಮದ್ಯಮುಕ್ತವನ್ನಾಗಿ ಮಾಡುವಂತೆ ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಶಂಕರಮ್ಮ, ಜಯಣ್ಣ, ಶಿವಾನಂದಪ್ಪ ಹಾಗೂ ಗ್ರಾಮಸ್ಥರಾದ ರತ್ನಮ್ಮ, ಗುತ್ಯಮ್ಮ, ಲೋಲಮ್ಮ, ಶಂಕರಮ್ಮ, ಶಿವಮ್ಮ, ಬಿ.ರುದ್ರಮ್ಮ, ಟಿ.ಜಗದೀಶ, ನಿಂಗಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...