Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೀಮಸಮುದ್ರದಲ್ಲಿ ಗಣಿ ಲಾರಿ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 21 : ತಾಲ್ಲೂಕಿನ ಭೀಮಸಮುದ್ರದಲ್ಲಿಂದು ಗ್ರಾಮಸ್ಥರು ಗಣಿ ಲಾರಿಗಳ ಓಡಾಟ ಮಾಡದಂತೆ ಪ್ರತಿಭಟನೆ ನಡೆಸಿದರು.

ಗ್ರಾಮದ ಮಧ್ಯಭಾಗದಲ್ಲಿ ಲಾರಿಗಳನ್ನು ತಡೆದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಮಾರು 20 ದಿನಗಳಿಂದ ಲಾರಿ ಸಂಚಾರ ಸ್ಥಗಿತಗೊಂಡಿತ್ತು. ಇಷ್ಟು ದಿನ ಸಾರ್ವಜನಿಕರು ನೆಮ್ಮದಿಯಿಂದ ಜೀವನ ಮಾಡುತ್ತಿದ್ದರು. ದಿಢೀರ್ ಆಗಿ ರಾತ್ರೋರಾತ್ರಿ ಸುಮಾರು 2.00 ವೇಳೆಗೆ (ಸೋಮವಾರ ರಾತ್ರಿ) 150 ಲಾರಿಗಳು ಗ್ರಾಮದ ಒಳಗಡೆ ಪ್ರವೇಶ ಮಾಡಲು ಸಜ್ಜಾಗಿದ್ದವು. ಆದರೆ ಗ್ರಾಮಸ್ಥರ ವಿರೋಧದ ನಡುವೆಯೇ ಈ ಲಾರಿಗಳನ್ನು ಗ್ರಾಮದ ಒಳಗಡೆ ಸಂಚರಿಸಲು ಜಿಲ್ಲಾಧಿಕಾರಿಗಳ ಆದೇಶವಾಗಿತ್ತು ಎಂದು ಲಾರಿ ಟ್ರಾನ್ಸ್ಪೋರ್ಟ್ ಸಿಬ್ಬಂದಿಯವರು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ತೊಂದರೆ ಆದರೂ ಕೂಡ ಲಾರಿಗಳ ಓಡಾಟವನ್ನು ನಡೆಸುತ್ತೇವೆಂದು ಇರೋದು ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತಪಡಿಸುವಂತಾಗಿದೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಲಾರಿ ರಾತ್ರಿ ಬಂದಿದ್ದವು ಎಂದು ತಿಳಿದುಬಂದಿದೆ.

ಭೀಮಸಮುದ್ರ ಗ್ರಾಮದ ರೈತ ಸಂಘದ ಅಧ್ಯಕ್ಷರಾದ ಶಂಕ್ರಮೂರ್ತಿ ಮಾತನಾಡಿ, 20 ದಿನಗಳ ಕಾಲ ಗ್ರಾಮದಲ್ಲಿ ಲಾರಿ ಸಂಚರಿಸಲು ಗ್ರಾಮಸ್ಥರು ಹಾಗೂ ನಾವುಗಳು ಬಿಟ್ಟಿರಲಿಲ್ಲ. ಆದರೆ ರಾತ್ರಿ ಇಡೀ ಲಾರಿಗಳನ್ನು ಕಾಯುವ ಪರಿಸ್ಥಿತಿ ಬಂದಿದೆ. ನಾವು ಕೇಳುತ್ತಿರುವುದು ಒಂದೇ ಗ್ರಾಮದ ಒಳಗಡೆ ಗಣಿ ಲಾರಿಗಳ ಸಂಚಾರ ಬೇಡ. ಪರ್ಯಾಯಮಾರ್ಗವನ್ನು ರೂಪಿಸಿಕೊಳ್ಳಲು ತಿಳಿಸುತ್ತಿದ್ದೇವೆ. ಗಣಿಗಾರಿಕೆ ಮಾಡಲು ನಾವು ಅವರನ್ನು ತೊಂದರೆ ಮಾಡುತ್ತಿಲ್ಲ. ಇದರಿಂದ ಸರ್ಕಾರಕ್ಕೂ ಆದಾಯ ನಷ್ಟವಾಗುತ್ತದೆ ಎಂಬುದು ನಮಗೂ ಗೊತ್ತಿದೆ. ಆದ್ದರಿಂದ
ರೈಲು ಗೋಗಿಗಳ ಮುಖಾಂತರ ವ್ಯವಸ್ಥೆ ಮಾಡಿಕೊಳ್ಳಲಿ ಎಂದು ತಿಳಿಸಿದರು.

ಗ್ರಾಮದ ರೈತ ಮುಖಂಡರಾದ ವೀರೇಶ್ ಮಾತನಾಡಿ ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿಗಳನ್ನು ಗ್ರಾಮಸ್ಥರನ್ನು ಹಾಗೂ ರೈತ ಮುಖಂಡರನ್ನು ಕರೆಸಿ ಲಾರಿಗಳನ್ನು ಓಡಾಡಲು ಬೇರೆ ವ್ಯವಸ್ಥೆ ಮಾಡಿಕೊಡುತ್ತೇವೆ. ಇಲ್ಲವಾದರೆ ತಮಗೇನಾದರೂ ಗೊತ್ತಿದ್ದರೆ ಬೇರೆ ಮಾರ್ಗವನ್ನು ತಿಳಿಸಿ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದರು. ಆದರೆ ದಿಢೀರ್ ರಾತ್ರಿ 150 ಲಾರಿಗಳು ಬಂದಿರುವುದನ್ನು ಕಂಡು ಗಾಬರಿಯಾಗಿದ್ದೇವೆ.
ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಲಾರಿಗಳು ಓಡಾಡುತ್ತವೆ. ಆದರೆ ಇತ್ತೀಚಿಗೆ ಆರೋಗ್ಯದ ಸಮಸ್ಯೆ ಕಾರಣದಿಂದ ನಾವು ತುಂಬಾ ತೊಂದರೆ ಅನುಭವಿಸುತ್ತಿದ್ದೇವೆ. ದಿನನಿತ್ಯ ಕಣ್ಣಿನಲ್ಲಿ ಧೂಳಿನ ಅಂಶ ಕಂಡುಬಂದಿದ್ದು ಸುಮಾರು ಒಂದು ವರ್ಷಗಳಿಂದ ನಾನು ಆಸ್ಪತ್ರೆಗೆ ಓಡಾಡುತ್ತಿದ್ದೇನೆ.

ರಸ್ತೆ ಮೇಲೆ ಬಿದ್ದ ಧೂಳು ಮನೆಗಳಲ್ಲಿ ಆಹಾರ ಪದಾರ್ಥದಲ್ಲೂ ಧೂಳು ಕಂಡುಬರುತ್ತದೆ. ಊಟ ಮಾಡಲು ಸಮಸ್ಯೆಯಾಗುತ್ತಿದೆ. ಆದರೆ ಸರ್ಕಾರ ಜಿಲ್ಲಾಡಳಿತ ನಿರ್ಲಕ್ಷ್ಯ ಧೋರಣೆಯಿಂದ ಗ್ರಾಮದಲ್ಲಿರುವ ಅನೇಕ ಜನರಿಗೆ ತೊಂದರೆಯಾಗುತ್ತಿದೆ ಇದನ್ನು ಕೂಡಲೇ ಗಮನಹರಿಸಬೇಕೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now