Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಿಚ್ಚನ ಸಿನಿಮಾದಲ್ಲಿ ವಿನಯ್ ಗೌಡ : ಫ್ಯಾನ್ಸ್ ದಿಲ್ ಖುಷ್

Facebook
Twitter
Telegram
WhatsApp

 

ಈಗಷ್ಟೇ ಬಿಗ್ ಬಾಸ್ ಸೀಸನ್ 10 ಮುಕ್ತಾಯಗೊಂಡಿದೆ. ಕಿಚ್ಚ ಸುದೀಪ್ ತಮ್ಮ ಸಿನಿಮಾದತ್ತ ಗಮನ ಹರಿಸಿದ್ದಾರೆ. ಮ್ಯಾಕ್ಸ್ ಸಿನಿಮಾದ ವಿಚಾರವಾಗಿ #Askkiccha ಅಡಿಯಲ್ಲಿ ಸುದೀಪ್ ಅಭಿಮಾನಿಗಳ ಜೊತೆಗೆ ಸಂಪರ್ಕ ಸಾಧಿಸಿದ್ದಾರೆ. ಅಭಿಮಾನುಗಳಿಗೂ ಸಿನಿಮಾ ಬಗ್ಗೆ, ಕಿಚ್ಚನ ಬಗ್ಗರ ಸಾಕಷ್ಟು ವಿಚಾರಗಳನ್ನು ಕೇಳಿ ತಿಳಿದುಕೊಳ್ಳುವುದಿರುತ್ತದೆ. ಹೀಗಾಗಿ ಕಿಚ್ಚ ಕೊಟ್ಟ ಅವಕಾಶವನ್ನು ಚೆನ್ನಾಗಿಯೇ ಬಳಸಿಕೊಂಡಿದ್ದಾರೆ.

ಕಿಚ್ಚನಿಗೆ ಪ್ರಶ್ನೆಗಳನ್ನು ಕೇಳಿದ್ದು, ಅದರಲ್ಲಿ ದರ್ಶನ್ ಹಾಗೂ ಅವರ ನಡುವಿನ ಸಮಸ್ಯೆಯ ಬಗ್ಗೆಯೂ ಅಭಿಮಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಇದೀಗ ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಬಗ್ಗೆಯೂ ಪ್ರಶ್ನೆಗಳನ್ನು ಕೇಳಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ವಿನಯ್ ಗೌಡ ವಿಲನ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಎಲ್ಲರಿಗೂ ಭಯ ಹುಟ್ಟಿಸುತ್ತಾ, ಒಂದು ರೀತಿಯಲ್ಲಿ ಖಡಕ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಅದಕ್ಕೆ ಬಿಗ್ ಬಾಸ್ ಮನೆಯ ಆನೆ ಅಂತಾನೇ ಅವರನ್ನು ಕರೆಯಲಾಗುತ್ತಿತ್ತು.

ಕಿಚ್ಚ ಸುದೀಪ್ ಬಳಿ ಅಭಿಮಾನಿಯೊಬ್ಬರು, ನಿಮ್ಮ ಮುಂದಿನ ಸಿನಿಮಾದಲ್ಲಿ ವಿನಯ್ ಗೌಡ ಅವರಿಗೂ ಅವಕಾಶ ಸಿಗಬಹುದೇ ಎಂಬ ರೀತಿಯಲ್ಲಿ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರ ನೀಡಿರುವ ಕಿಚ್ಚ ಸುದೀಪ್, ಖಂಡಿತಾ.. ಅವರದ್ದು ಅದ್ಭುತವಾದ ವ್ಯಕ್ತಿತ್ವ ಎಂದೇ ಉತ್ತರ ನೀಡಿದ್ದಾರೆ. ಇದನ್ನು ಕಂಡ ವಿನಯ್ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿ ಪಟ್ಟಿದ್ದಾರೆ. ಸುದೀಪ್ ಹಾಕಿರುವ ಪ್ರತಿಕ್ರಿಯೆಯ ಕಮೆಂಟ್ ಇರುವ ಸ್ಕ್ರೀನ್ ಶಾಟ್ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಹಬ್ಬ ಮಾಡುತ್ತಾ ಇದ್ದಾರೆ. ಮುಂದಿನ ಸಿನಿಮಾಗಳಲ್ಲು ವಿನಯ್ ಅವರನ್ನು ಸುದೀಪ್ ಜೊತೆಗೆ ವಿಲನ್ ಆಗಿ ನೋಡುವ ಅಭಿಮಾನಿಗಳ ಆಸೆಗೆ ಕಿಚ್ಚ ಕೂಡ ಪಾಸಿಟಿವ್ ಉತ್ತರ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!