Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಡ್ಜ್ ಎದುರು ಕಣ್ಣೀರು ಹಾಕಿದ ವಿನಯ್ ಕುಲಕರ್ಣಿ

---Advertisement---

ಬೆಂಗಳೂರು: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ಸಾಬೀತಾಗಿದ್ದು, ಇಂದು ಶಿಕ್ಷೆಯ ಪ್ರಮಾಣವನ್ನ ಕೋರ್ಟ್ ಪ್ರಕಟಿಸಬೇಕಿತ್ತು. ಆದರೆ ಪ್ರಕಟ ಮಾಡಿಲ್ಲ. ನಾಳೆಗೆ ಶಿಕ್ಷೆಯ ಪ್ರಮಾಣವನ್ನ ಮುಂದೂಡಿಕೆ ಮಾಡಿದೆ. ಅದಕ್ಕೂ ಮುನ್ನ ಕೋರ್ಟ್ ನಲ್ಲಿ ಜಡ್ಜ್ ಗಳ ಮುಂದೆ ವಿನಯ್ ಕುಲಕರ್ಣಿ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ. ಕೋರ್ಟ್ ಗೆ ಹೋಗುವುದಕ್ಕೂ ಮುನ್ನ ವಿಶ್ವಾಸವಿದೆ ಎಂಬ ಮಾತನ್ನ ಹೇಳಿದ್ದರು. ಇದೀಗ ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದಿದ್ದಾರೆ.

ನಾನು ಯಾರಿಗೂ ಈವರೆಗೂ ಅನ್ಯಾಯ ಮಾಡಿಲ್ಲ. ಈ ಪ್ರಕರಣದಲ್ಲಿ ನಿಜಕ್ಕೂ ನನಗೆ ಅನ್ಯಾಯವಾಗಿದೆ. ನನಗೆ ಇಬ್ಬರು ಹೆಣ್ಣು ಮಕ್ಕಳ, ಒಬ್ಬ ಮಗನಿದ್ದಾನೆ. ಮೂವರಿಗೂ ಮದುವೆ ಮಾಡಬೇಕಿದೆ. ನನ್ನ ಕುಟುಂಬದ ಪರಿಸ್ಥಿತಿ ಹೀಗಿದೆ ಎಂಬುದರ ಬಗ್ಗೆ ಮಾತನ್ನಾಡುತ್ತಾ ಅನುಕಂಪ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಇನ್ನು ಇಂದು ವಾದ – ಪ್ರತಿವಾದ ಆಲಿಸಿರುವ ಕೋರ್ಟ್ ನಾಳೆ ತೀರ್ಪನ್ನ ಪ್ರಕಟ ಮಾಡಲಿದೆ. ವಿನಯ್ ಕುಲಕರ್ಣಿ ಪರವಾಗಿ ಶಾಮ್ ಅವರು ವಾದ ಮಂಡನೆ ಮಾಡಿದರು. ಕಡಿಮೆ ಪ್ರಮಾಣದ ಶಿಕ್ಷೆಯನ್ನು ನೀಡುವಂತೆ ಮನವಿ ಮಾಡಿದ್ದಾರೆ. ವಿನಯ್ ಕುಲಕರ್ಣಿ ಅವರ ತಂದೆಯ ವಯಸ್ಸಿನ ಬಗ್ಗೆಯೂ ಮೆನ್ಶನ್ ಮಾಡಿದ್ದಾರೆ. ಜೀವಿತಾವಧಿ ಶಿಕ್ಷೆ ಕೊಡುವುದು ಗಲ್ಲು ಶಿಕ್ಷೆಗಿಂತ ಘೋರ ಶಿಕ್ಷೆಯಾದಂತೆ ಆಗುತ್ತದೆ. ನಾಲ್ಕು ಗೋಡೆಗಳ ನಡುವೆಯೇ ಜೀವನ ನಡೆಸಬೇಕು. ಆದರೆ ಅವರ ಕುಟುಂಬ ಹೊರಗೆ ನರಳುತ್ತಾ ಇರುತ್ತದೆ. ಹೀಗಾಗಿ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದೆಲ್ಲವನ್ನು ಕೇಳಿಸಿಕೊಂಡ ಕೋರ್ಟ್ ಸದ್ಯ ಶಿಕ್ಷೆಯ ಪ್ರಮಾಣವನ್ನ ನಾಳೆಗೆ ಮುಂದೂಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now