ಜೈಲಿನಿಂದ ಹೊರ ಬಂದ ವಿನಯ್ ; ಪೊಲೀಸರ ಬಗ್ಗೆ ಹೇಳಿದ್ದೇನು..?

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡುವ ಬರದಲ್ಲಿ ಮಚ್ಚು ತಿರುಗಿಸಿದ್ದ ರಜತ್ ಅಂಡ್ ವಿನಯ್ ಕೆಲ ಕಾಲ ಜೈಲುವಾಸವನ್ನು ಅನುಭವಿಸುವಂತೆ ಆಯ್ತು. ನಿನ್ನೆ ಜಾಮೀನು ಮಂಜುರಾಗಿತ್ತು, ಇಂದು ಜೈಲಿಂದ ರಿಲೀಸ್ ಆಗಿದ್ದಾರೆ. ಜೈಲಿನಿಂದ ಹೊರ ಬರುತ್ತಲೇ ವಿನಯ್ ವಿಡಿಯೋ ಮೂಲಕ ಜನರ ಕ್ಷಮೆ ಕೇಳಿ ಪೊಲೀಸರ ಬಗ್ಗೆಯೂ ಮಾತನಾಡಿದ್ದಾರೆ.

ಎಲ್ಲರಿಗೂ ಗೊತ್ತಿರುವಂತೆ ಒಂದು ಘಟನೆ ನಡೆದು ಹೋಗಿದೆ. ಈ ವಿಡಿಯೋ ಮಾಡುತ್ತಿರುವ ಉದ್ದೇಶವೆಂದರೆ ಕರ್ನಾಟಕದಲ್ಲಿ ಪ್ರತಿಯೊಬ್ಬರಿಗೂ ನನ್ನ ಕಡೆಯಿಂದ ಕ್ಷಮೆ ಕೇಳಬೇಕಿತ್ತು. ದಯವಿಟ್ಟು ನನ್ನನ್ನು ಕ್ಷಮಿಸಿ ಬಿಡಿ. ಒಂದು ಮಚ್ಚಿನ ಕಥೆ ನೀವೂ ನೋಡಿರಬಹುದು. ಅದಕ್ಕಾಗಿ ಕ್ಷಮೆ ಕೇಳುತ್ತಿದ್ದೇನೆ. ಎಲ್ಲರಿಗೂ ನಾನು ಮನಃಪೂರ್ವಕವಾಗಿ ಕ್ಷಮೆ ಕೋರುತ್ತೇನೆ. ಸಾಕಷ್ಟು ಜನ ಹಗಲು ರಾತ್ರಿ ಎಂದು ನೋಡದೆ ಬೆಂಬಲ ನೀಡಿದ್ದೀರಿ. ನಿಮಗೆಲ್ಲ ಧನ್ಯವಾದಗಳು. ನನ್ನ ಅಕ್ಕ ಭಾವ, ಮಾಧ್ಯಮದವರಿಗೂ ಕ್ಷಮೆ ಕೇಳುವೆ. ನಾನು ಆ ಮಚ್ಚು ಹಿಡಿದುಕೊಂಡು ವಿಡಿಯೋ ಮಾಡಬಾರದಿತ್ತು. ಈ ವಿಷಯ ಇಷ್ಟು ದೊಡ್ಡದಾಗುತ್ತೆ ಅಂತ ನನಗೆ ಗೊತ್ತಿರಲಿಲ್ಲ. ನನ್ನ ಎಚ್ಚರಿಕೆಯಲ್ಲಿ ನಾನು ಇರಬೇಕಿತ್ತು ಎಂದಿದ್ದಾರೆ.

ಇದೇ ವೇಳೆ ಪೊಲೀಸರ ಬಗ್ಗೆ ಮಾತನಾಡಿದ ವಿನಯ್, ಪೊಲೀಸರು ಅವರ ವೃತ್ತಿ ಮಾಡಿದ್ದಾರೆ. ಸೆಲೆಬ್ರೆಟಿ, ಸಾಮಾನ್ಯ ವ್ಯಕ್ತಿ ಎಂಬ ಭಿನ್ನತೆ ಇಲ್ಲದೆ ಅವರು ಕಾರ್ಯ ಮಾಡಿದ್ದಾರೆ. ಪೊಲೀಸರು ನಮ್ಮನ್ನು ಸಾಮಾನ್ಯರಂತೆ ನಡೆದುಕೊಂಡರು. ದಯವಿಟ್ಟು ಯಾರೂ ಸಹ ಅವರ ಮೇಲೆ ಆರೋಪಗಳನ್ನು ಮಾಡುವುದು ಬೇಡ. ಗೌರವಯುತವಾಗಿ ನಡೆಸಿಕೊಂಡರು. ಗೌರವಯುತವಾಗಿಯೇ ನಡೆದುಕೊಂಡಿದ್ದಾರೆ ಎಂದು ಪೊಲೀಸರ ಬಗ್ಗೆ ಹೇಳಿದ್ದಾರೆ. ಮಚ್ಚು ಹಿಡಿದು ರೀಲ್ಸ್ ಮಾಡಿ, ರಜತ್ ಹಾಗೂ ವಿನಯ್ ಲಾಕ್ ಆಗಿದ್ದರು.

suddionenews

Recent Posts

ಈ ಸಮಸ್ಯೆಗಳಿರುವವರು ಖರ್ಜೂರ ತಿನ್ನಲೇಬಾರದು…!

ಸುದ್ದಿಒನ್ : ಖರ್ಜೂರ ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಆದರೆ, ಇದರಿಂದ ಕೇವಲ ಪ್ರಯೋಜನಗಳು ಮಾತ್ರ ಇದೆ ಎಂದು ನೀವು…

3 hours ago

ಈ ರಾಶಿಯವರಿಗೆ ಲೇಟ್ ಆದರೂ ಪರವಾಗಿಲ್ಲ ಒಳ್ಳೆ ಸಂಗಾತಿ ಸಿಗುವರು

ಈ ರಾಶಿಯವರಿಗೆ ಲೇಟ್ ಆದರೂ ಪರವಾಗಿಲ್ಲ ಒಳ್ಳೆ ಸಂಗಾತಿ ಸಿಗುವರು, ಈ ರಾಶಿಯ ದಂಪತಿಗಳಿಗೆ ಸಂತಾನ ಫಲ, ಬುಧವಾರದ ರಾಶಿ…

5 hours ago

ರಾಜ್ಯದಲ್ಲಿ ಡಿಸೇಲ್ ದರ ಏರಿಕೆ ; ಇಂದು ಮಧ್ಯರಾತ್ರಿಯಿಂದಾನೇ ನೂತನ ದರ ಅನ್ವಯ, ಎಷ್ಟು ಏರಿಕೆಯಾಗಲಿದೆ..?

ಬೆಂಗಳೂರು; ಇಂದಿನಿಂದ ರಾಜ್ಯದಲ್ಲಿ ಹಲವು ಬದಲಾವಣೆಗಳು ಆಗಿವೆ. ಹಲವು ವಸ್ತುಗಳ ದರ ಏರಿಕೆಯೂ ಆಗಿದೆ. ಇದರ ಬೆನ್ನಲ್ಲೇ ಡಿಸೇಲ್ ದರವೂ…

12 hours ago

ಶ್ರೀ ಸದ್ಗುರು ಎರ‍್ರಿತಾತನವರ ವಾರ್ಷಿಕ ಜಾತ್ರೆ/ರಥೋತ್ಸವ ನಿಷೇಧ : ಯಾಕೆ ಗೊತ್ತಾ ? ಜಿಲ್ಲಾಧಿಕಾರಿ ಆದೇಶದಲ್ಲೇನಿದೆ ?

ಬಳ್ಳಾರಿ,ಏ.01 :‌ ಬಳ್ಳಾರಿ ತಾಲ್ಲೂಕಿನ ಕೊಳಗಲ್ ಗ್ರಾಮದಲ್ಲಿ ಏ.04 ರಂದು ನಡೆಯುವ ಶ್ರೀ ಸದ್ಗುರು ಎರ‍್ರಿತಾತನವರ ವಾರ್ಷಿಕ ಜಾತ್ರೆ/ರಥೋತ್ಸವವನ್ನು ಕರ್ನಾಟಕ…

15 hours ago

ಅಂಬೇಡ್ಕರ್ ಜಯಂತಿ : ಅದ್ದೂರಿ ಹಾಗೂ ಅರ್ಥಪೂರ್ಣ ಆಚರಣೆಗೆ ಸಿದ್ಧತೆ

ಚಿತ್ರದುರ್ಗ.ಎಪ್ರಿಲ್.01: ಮುಂಬರುವ ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿಲು ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ…

15 hours ago

ಸಾರ್ವಕಾಲಿಕ ದಾಖಲೆ ತಲುಪಿದ ಚಿನ್ನದ ಬೆಲೆ : ಲಕ್ಷ ರೂಪಾಯಿ ಗಡಿ ದಾಟುತ್ತಾ ?

ಸುದ್ದಿಒನ್ : ಮಂಗಳವಾರ ಭಾರತದಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯನ್ನು ತಲುಪಿದೆ. ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್ (ಎಂಸಿಎಕ್ಸ್) ನಲ್ಲಿ ಚಿನ್ನದ…

15 hours ago