ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ವಿನೋದ ಅಸೂಟಿ, ಸಚಿವ ಸಂತೋಷ ಲಾಡ್ ಮತ್ತು ಸಲೀಂ ಅಹಮದ್

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಏ.19 : ಧಾರವಾಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ, ಕರ್ನಾಟಕ ಸರಕಾರದ ಸಚಿವರಾದ ಸಂತೋಷ ಲಾಡ್ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್ ಅವರು ಚಿತ್ರದುರ್ಗ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ಶ್ರೀಗಳ ಆಶೀರ್ವಾದ ಪಡೆದರು.

ಭೋವಿ ಗುರುಪೀಠದ  ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ  ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಈಡಿಗ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಶಿವಶಕ್ತಿ ಗುರುಪೀಠದ ಶ್ರೀ ಬಸವಪ್ರಸಾದ ಸ್ವಾಮೀಜಿ, ಪಾರಮಾರ್ಥಿಕ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಶ್ರೀ ಬಸವ ಮಹಾಲಿಂಗ ಸ್ವಾಮೀಜಿ, ಬಸವಕಲ್ಯಾಣ  ಶ್ರೀ ಸತ್ಯಕ್ಕ ತಾಯಿ,  ಪೂಜ್ಯರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಚಂದ್ರಪ್ಪ ಜುಟ್ಟಲ್, ನರೇಶ ಮಲೆನಾಡು, ಗಿರೀಶ ಮಲೆನಾಡು, ಕವಿತಾ ರೆಡ್ಡಿ, ರಾಜೇಶ್ವರಿ ಪಾಟೀಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks