Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ವಂತ ಹಣದಿಂದ ರಸ್ತೆ ರಿಪೇರಿ ಮಾಡಿಸಿದ ವಿನೋದ್ ರಾಜ್

---Advertisement---

ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಕನ್ನಡ ಇಂಡಸ್ಟ್ರಿಯಿಂದ ದೂರವಾಗಿ ಬಹಳ ವರ್ಷಗಳೇ ಕಳೆದವು. ಒಂದೆರಡು ಸಿನಿಮಾ ಮಾಡಿ, ನಟನೆಯಿಂದ ದೂರವಾದರೂ. ಡ್ಯಾನ್ಸ್ ಮಾಡುವುದರಲ್ಲಿ ವಿನೋದ್ ರಾಜ್ ಎತ್ತಿದ ಕೈ. ಆದರೆ ಅವರನ್ನು ಸ್ಯಾಂಡಲ್ ವುಡ್ ಕೈಬೀಸಿ ಕರೆದಿದ್ದು ಬಹಳ ಕಡಿಮೆಯೇ ಬಿಡಿ.

ವಿನೋದ್ ರಾಜ್ ತಮ್ಮ ತಾಯಿಯೊಂದಿಗೆ ಗಾಂಧಿನಗರದಿಂದ ದೂರವಾಗಿ ಬೆಂಗಳೂರಿನ ಹೊರವಲಯದಲ್ಲಿ ವಾಸ ಮಾಡುತ್ತಿದ್ದರು. ತಾಯಿಯೇ ಸರ್ವಸ್ವ ಎಂದು ಬದುಕಿದವರು. ಆದರೆ ಇತ್ತಿಚೆಗೆ ಲೀಲಾವತಿ ಅವರು ಎಲ್ಲರನ್ನು ಬಿಟ್ಟು ಬಾರದೂರಿಗೆ ಹೊರಟೆ ಬಿಟ್ಟರು. ಆದರೆ ತಾಯಿಯ ಆಸೆಯಂತೆ ವಿನೋದ್ ರಾಜ್ ಜನರ ನಡುವೆ ಬದುಕುತ್ತಿದ್ದು, ಜನರ ಕಷ್ಟಗಳಿಗೆ ಮಿಡಿಯುತ್ತಿದ್ದಾರೆ.

ವಿನೋದ್ ರಾಜ್ ಮತ್ತು ಲೀಲಾವತಮ್ಮ ಸೋಲದೇವನಹಳ್ಳಿ ಜನತೆಗೆ ಮಾಡಿಕೊಟ್ಟಿರುವ ಸೌಲಭ್ಯಗಳು ಅಷ್ಟಿಷ್ಟಲ್ಲ. ಸರ್ಕಾರದ ಸಹಾಯಕ್ಕಾಗಿ ಕಾಯದೆ ಪ್ರಾಥಮಿಕ ಆರೊಇಗ್ಯ ಕೇಂದ್ರ ಕಟ್ಟಿಸಿದ್ದಾರೆ, ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಿಸಿದ್ದಾರೆ. ಇತ್ತಿಚೆಗೆ ರೈತರ ಹಸುಗಳಿಗೆ ಹುಲ್ಲನ್ನು ನೀಡಿದ್ದರು. ಈಗ ರಸ್ತೆ ಕೆಲಸದ ಕಡೆಗೆ ಗಮನ ನೀಡಿದ್ದಾರೆ.

ಇಷ್ಡೊತ್ತಿಗೆ ಮಳೆಯಾಗಬೇಕಿತ್ತು. ಆದರೆ ಅಲ್ಲೊಮ್ಮೆ ಇಲ್ಲೊಮ್ಮೆ ಮಳೆಯಾಗುತ್ತಿದೆ. ಬಂದರೆ ಜೋರು ಮಳೆ ಬರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಸಂಬಂಧ ಸೋಲದೇವನಹಳ್ಳಿಯ ಹಾಳಾದ ರಸ್ತೆಗಳನ್ನು ಸರಿ ಮಾಡಿಸುತ್ತಿದ್ದಾರೆ. ಮಳೆ ಬಂದರೆ ರಸ್ತೆಗಳಲ್ಲಿ ಓಡಾಡುವ ಜನ ಸಂಕಷ್ಟಕ್ಕೆ ಒಳಗಾಗುತ್ತಾರೆ ಎಂಬ ಮಾನವೀಯತೆಯ ದೃಷ್ಟಿಯಿಂದ ಕಿತ್ತು ಹೋಗಿರುವ ರಸ್ತೆಗೆಲ್ಲಾ ಪ್ಯಾಚಪ್ ಮಾಡಿಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment