Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಸ್ವಾಮಿ ಮನೆಗೆ ಸಂಧಾನ ಮಾಡಲು ಹೋಗಿದ್ರಾ ವಿನೋದ್ ರಾಜ್ ? ಅವರು ಹೇಳಿದ್ದೇನು..?

Facebook
Twitter
Telegram
WhatsApp

ಸುದ್ದಿಒನ್, ಬೆಂಗಳೂರು: ಇತ್ತಿಚೆಗಷ್ಟೇ ಹಿರಿಯ ನಟ ವಿನೋದ್ ರಾಜ್ ಮೃತ ರೇಣುಕಾಸ್ವಾಮಿ ಮನೆಗೆ ಹೋಗಿ ಸಾಂತ್ವನ ಹೇಳಿದ್ದರು. ಜೊತೆಗೆ ಒಂದು ಲಕ್ಷ ರೂಪಾಯಿಯ ಚೆಕ್ ಅನ್ನು ನೀಡಿದ್ದರು. ವಿನೋದ್ ರಾಜ್ ಭೇಟಿಯ ಬೆನ್ನಲ್ಲೇ ಹಲವು ವಿಚಾರಗಳು ಚರ್ಚೆಗೆ ಬಂದಿತ್ತು. ಯಾಕಂದ್ರೆ ರೇಣುಕಾಸ್ವಾಮಿ ಮನೆಗೆ ಹೋಗುವುದಕ್ಕೂ ಮುನ್ನ ವಿನೋದ್ ರಾಜ್ ಅವರು ಪರಪ್ಪನ ಅಗ್ರಹಾರಕ್ಕೂ ಹೋಗಿ ದರ್ಶನ್ ಅವರನ್ನು ಭೇಟಿ ಮಾಡಿದ್ದರು. ಹೀಗಾಗಿ ವಿನೋದ್ ರಾಜ್ ಅವರು ರೇಣುಕಾಸ್ವಾಮಿ ಅವರ ಮನೆಗೆ ಹೋಗಿದ್ದೆ ರಾಜಿ ಸಂಧಾನ ಮಾಡುವುದಕ್ಕಾ ಎಂಬ ಪ್ರಶ್ನೆಗಳು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಬಂದಿತ್ತು. ಇದೀಗ ನಟ ವಿನೋದ್ ರಾಜ್ ಅವರೇ ಕ್ಲಾರಿಟಿ ಕೊಟ್ಟಿದ್ದಾರೆ.

‘ಮೊನ್ನೆ ನಾಲ್ಕೈದು ದಿನದ ಹಿಂದೆ ದರ್ಶನ್ ಅವರನ್ನು ನೋಡುವುದಕ್ಕೆ ಕಾರಾಗೃಹಕ್ಕೆ ಹೋಗಿದ್ದೆ. ಎರಡ್ಮೂರು ದಿನ ಬಿಟ್ಟು ರೇಣುಕಾಸ್ವಾಮಿ ಮನೆಗೆ ಹೋಗಿದ್ದೆ. ವಾಹಿನಿಗಳ ಮೂಲಕ ನನಗೆ ಅರ್ಥವಾಗಿದ್ದು ಏನೆಂದರೆ ರಾಜಿಸಂಧಾನ ಮಾಡುವುದಕ್ಕೋ, ಇನ್ಯಾವುದಕ್ಕೋ ನಾನು ಹೋಗಿದ್ದೀನಿ ಅಂತ ಬಿಂಬಿಸಲಾಗಿದೆ. ಖಂಡಿತ ಅದಲ್ಲ. ದರ್ಶನ್ ಅವರನ್ನು ಒಬ್ಬ ಕಲಾವಿದ ಎಂಬ ದೃಷ್ಟಿಯಿಂದ ಹೋಗಿ ನೋಡಿಕೊಂಡು ಬಂದೆ. ಚಿತ್ರದುರ್ಗಕ್ಕೆ ಯಾಕೆ ಹೋದೆ ಅಂದ್ರೆ, ರೇಣುಕಾಸ್ವಾಮಿ ಶ್ರೀಮತಿ ಅವರು ಗರ್ಭಿಣಿ. ಹುಟ್ಟುವ ಮಗುವಿಗೆ ಏನಾದರೂ ಒಳ್ಳೆಯದಾಗುತ್ತಾ ಅಂತ ಹೋಗಿದ್ದೆ. ನನ್ನ ಕಡೆಯಿಂದ ಒಂದು ಸಣ್ಣ ಕಾಣಿಕೆ ನೀಡಿದ್ದೇನೆ ಅಷ್ಟೆ.

ಯಾವುದೇ ರಾಜಿ ಸಂಧಾನ ಮಾಡುವುದಕ್ಕೆ ನಾನು ಹೋಗಿಲ್ಲ. ಅಂತಹ ಕೆಲಸವನ್ನು ನಾವೂ ಮಾಡುವುದು ಇಲ್ಲ. ಅವರ ಮನೆಯವರು ದುಃಖದಲ್ಲಿದ್ದಾರೆ ಎಂದು ಸಾಂತ್ವನ ಹೇಳಿದ್ದು ಬಿಟ್ಟರೆ ಈಗಿನ್ನು ಹುಟ್ಟಬೇಕಾದ ಮಗುವಿಗೆ ಸಹಾಯವಾಗಲೆಂದು ಚೆಕ್ ನೀಡಿ ಬಂದೆ‌’ ಎಂದು ನಟ ವಿನೋದ್ ರಾಜ್ ಕ್ಲಾರಿಟಿ ಕೊಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್‍ನವರು ದಲಿತ ಪರ, ಅಹಿಂದ ಪರ ಎಂದು ತೋರ್ಪಡಿಕೆಗೆ ಹೇಳುವುದನ್ನು ನಿಲ್ಲಿಸಲಿ : ಬಾಳೆಕಾಯಿ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಸೆ. 17 : ಹಿಂದು ಧರ್ಮದಲ್ಲಿ ದಲಿತರನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ, ಅವರನ್ನು ಎಲ್ಲೂ ಸಹಾ

ರಸ್ತೆಯ ಬದಿಯ ಗುಂಡಿಗೆ ಬಿದ್ದ KSRTC ಬಸ್: ಮೂವರಿಗೆ ಗಂಭೀರ ಗಾಯ..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಚಳ್ಳಕೆರೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುಂಡಿಗೆ ಬಿದ್ದಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಬೆಸ್ಕಾಂ

ಚಿತ್ರದುರ್ಗ. ಸೆ.17: ಸೆ.28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಜರುಗಲಿದೆ. ಶೋಭಾ ಯಾತ್ರೆ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ ಮುಖಾಂತರ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆಯ

error: Content is protected !!