Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಬಕಾರಿ ಮಾರಾಟ ಮಳಿಗೆ : ಲೈಸೆನ್ಸ್ ಈಗ 1 ರಿಂದ 3 ಕೋಟಿ..!

---Advertisement---

ಮದ್ಯ ಮಾರಾಟ ಮಳಿಗೆಗಳಿಗೆ ಈಗ ಲೈಸೆನ್ಸ್ ಪಡೆಯುವುದು ಅಷ್ಟು ಸುಲಭದ್ದಾಗಿಲ್ಲ. ಲೈಸೆನ್ಸ್ ಹರಾಜು ಪ್ರಕ್ರಿಯೆಗೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಕರ್ನಾಟಕ ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಅಬಕಾರಿ ಲೈಸೆನ್ಸ್ ಗಳನ್ನು ಹರಾಜು ಹಾಕಲು ಕರಡು ನಿಯಮಗಳನ್ನು ರಾಜ್ಯದ ಹಣಕಾಸು ಇಲಾಖೆಯು ಬಿಡುಗಡರ ಮಾಡಿದೆ. ಈ ಮೂಲಕ ಅಬಕಾರಿ ಇಲಾಖೆ 500 ಕೋಟಿ ರೂಪಾಯಿ ಆದಾಯ ಸಂಗ್ರಹಿಸಲು ರಾಜ್ಯ ಹಣಕಾಸು ಇಲಾಖೆ ಉದ್ದೇಶ ಹೊಂದಲಾಗಿದೆ.

ರಾಜ್ಯದಲ್ಲಿ ಒಟ್ಟಾರೆ 579 ಮದ್ಯ ಮಾರಾಟ ಮಳಿಗೆಗಳ ಲೈಸೆನ್ಸ್ ಗಳನ್ನು ಹರಾಜು ಹಾಕಲಾಗುತ್ತೆ ಎಂದು ಅಬಕಾರಿ ಸಚಿವರ ಕಚೇರಿ ತಿಳಿಸಿದೆ. ಆನ್ಲೈನ್ ನಲ್ಲಿ ಲಿಕ್ಕರ್ ಮಾರಾಟ ಮಳಿಗೆಗಳ ಲೈಸೆನ್ಸ್ ಅನ್ನು ಹರಾಜು ಹಾಕಲಾಗುತ್ತೆ. ಅತಿ ಹೆಚ್ಚು ಬಿಡ್ ಮಾಡಿದವರಿಗೆ ಮದ್ಯ ಮಾರಾಟದ ಬಾರ್ ಅಂಡ್ ರೆಸ್ಟೋರೆಂಟ್ ಸಿಗುತ್ತೆ ಎಂದು ಕರಡು ನಿಯಮದಲ್ಲಿ ತಿಳಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1992ರಿಂದ ಹೊಸದಾಗಿ ಸಿಎಲ್ 2 ಮತ್ತು ಸಿಎಲ್ 9 ಲೈಸೆನ್ಸ್ ಗಳನ್ನು ಯಾರಿಗೂ ನೀಡಿಲ್ಲ. ಹೀಗಾಗಿ ಸಿಎಲ್ 2 ಮತ್ತು ಸಿಎಲ್ 9 ಲೈಸೆನ್ಸ್ ಗಳಿಗೆ ಭಾರೀ ಬೇಡಿಕೆ ಇದೆ‌.

ಬೆಂಗಳೂರು ಒಂದರಲ್ಲಿಯೇ ಸಿಎಲ್ 2 ಮತ್ತು ಸಿಎಲ್ 9 ಲೈಸೆನ್ಸ್ ಬರೋಬ್ಬರಿ 3.8 ಕೋಟಿ ರೂಪಾಯಿಗೆ ಮಾರಾಟವಾಗಿರುವ ಉದಾಹರಣೆಯೂ ಇದೆ. ಈಗ ಲೈಸೆನ್ಸ್ ಹರಾಜಿನಲ್ಲಿ ಪ್ರತಿಯೊಂದು ಲೈಸೆನ್ಸಗ ಹರಾಜಿನಿಂದ ಬೆಂಗಳೂರಿನಲ್ಲಿ 3 ಕೋಟಿ ರೂಪಾಯಿವರೆಗೂ ಹರಾಜು ಆಗಬಹುದು ಎಂಬ ನಿರೀಕ್ಷೆಯಲ್ಲಿ ನಾವೂ ಇದ್ದೇವೆ ಎಂದು ಸಲಹೆಗಾರ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now