Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾನೂನು ಉಲ್ಲಂಘನೆ ಮಾಡಿದರೆ ಸುಮ್ಮನೆ ಇರಲ್ಲ : ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

ಸಚಿವ ಪರಮೇಶ್ವರ್
---Advertisement---

 

ಬೆಂಗಳೂರು: ಎಲ್ಲೆಡೆ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಬಳಕೆ ಮಾಡಬೇಕೆಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ 29 ಜನ ಕರವೇ ಕಾರ್ಯಕರ್ತರು ಪೊಲೀಸರ ವಶದಲ್ಲಿದ್ದಾರೆ. ಕಲ್ಲು ತೂರಾಟ ನಡೆಸಿದವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಈ ಸಂಬಂಧ ಮಾತನಾಡಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರು, ಕಾನೂನಿನ ಉಲ್ಲಂಘನೆ ಮಾಡಿದರೆ ಸುಮ್ಮನೆ ಇರುವುದಕ್ಕೆ ಆಗಲ್ಲ. ನಮ್ಮ ಸರ್ಕಾರ ಕನ್ನಡ ಪರವಾಗಿಯೇ ನಿಂತಿದೆ. ಯೋಜನೆಗಳು ಹಾಗೂ ತೀರ್ಮಾನಗಳ ಬಗ್ಗೆ ನಿಂತಿದೆ. ಕನ್ನಡ ಅನುಷ್ಠಾನದ ಬಗ್ಗೆ ಹಲವು ಬಾರಿ ತೀರ್ಮಾನ ಮಾಡಿದ್ದೇವೆ. ಲೈಸೆನ್ಸ್ ಕೊಡುವ ಸಮಯದಲ್ಲೂ ಕನ್ನಡದ ಬಗ್ಗೆ ತಿಳಿಸಿದ್ದೇವೆ. ಈಗ ಕರವೇ ಬಲವಂತವಾಗಿ ಬೋರ್ಡ್ ತೆಗೆಯೋದನ್ನ ಮಾಡಿದೆ. ಸಮಸ್ಯೆ ಇದ್ದರೆ ನಮ್ಮ ಗಮನಕ್ಕೆ ತರಬೇಕಿತ್ತು. ಸಾರ್ವಜನಿಕರಿಗೆ ಧಕ್ಕೆ ತರುವ ಕೆಲಸ ಮಾಡಬಾರದಿತ್ತು. ಅದಕ್ಕಾಗಿ ಪೊಲೀಸರು ಕ್ರಮ ತೆಗೆದುಕೊಳ್ಳುವ ಕೆಲಸ ಮಾಡಿದ್ದಾರೆ.

ಬಿಬಿಎಂಪಿ ಕೂಡ ಗಡುವು ನೀಡಿದೆ. ಕನ್ನಡ ಕಡ್ಡಾಯಕ್ಕೆ ಸೂಚನೆ ನೀಡಿದ್ದೇವೆ‌. ಕಡ್ಡಾಯ ಮಾಡುತ್ತೇವೆ. ಆದರೆ ಅದಕ್ಕೆ ಸ್ವಲ್ಪ ಸಮಯ ನೀಡಬೇಕು ಅಲ್ಲವಾ. ಪೊಲೀಸರು ಸರಿಯಾಗಿ ನಡೆಸಿಕೊಂಡಿಲ್ಲ ಅಂದರೆ ಹೇಗೆ..? ಪ್ರತಿಭಟನೆ ಮಾಡುವುದಕ್ಕೆ ಒಂದಷ್ಟು ಸಮಯ ಕೊಡುತ್ತಾರೆ. ಕಾನೂನಿನ ಉಲ್ಲಂಘನೆ ಮಾಡಿದರೆ ಸುಮ್ಮನೆ ಇರುವುದಕ್ಕೆ ಆಗಲ್ಲ. ಮಾಲ್ ಗಳಲ್ಲೂ ಭದ್ರತೆ ಕೇಳುತ್ತಾರೆ. ನಾವೂ ಯಾರ ಪರವೂ ಇಲ್ಲ. ವಿರೋಧವೂ ಇಲ್ಲ. ಕಾನೂನನ್ನು ಯಾರೇ ಉಲ್ಲಂಘನೆ ಮಾಡಿದರೂ ಸುಮ್ಮನೆ ಇರುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment