Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿವಿಧ ಪ್ರಕರಣಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ : ಚಿತ್ರದುರ್ಗದಲ್ಲಿ ಮಹಿಳಾ ಸಂಘಟನೆಗಳ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ,(ಜು.28) :  ಮಣಿಪುರದ ಮಹಿಳೆ ಬೆತ್ತಲೆ ಕೃತ್ಯದ ದೌರ್ಜನ್ಯ, ಉಡುಪಿಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಶೌಚಾಲಯದ ವಿಡಿಯೋ ಮಾಡಿ ವೈರಲ್ ಮಾಡಿರುವ ಬಗ್ಗೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಸೌಜನ್ಯಳ ಪ್ರಕರಣಗಳಲ್ಲಿ ಮಹಿಳೆಯರಿಗೆ ಆಗಿರುವ ದೌರ್ಜನ್ಯವನ್ನು ಖಂಡಿಸಿ ಇಂದು ವಿವಿಧ ಮಹಿಳಾ ಸಂಘಟನೆಗಳು ಪ್ರತಿಭಟನೆಯನ್ನು ನಡೆಸಿ ಮಹಿಳೆಯರಿಗೆ ಸುರಕ್ಷತೆ ಹಾಗೂ ಗೌರವದಿಂದ ಬದುಕಲು ವ್ಯವಸ್ಥೆಯನ್ನು ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದರು.

ಮಣಿಪುರದಲ್ಲಿನ ಎರಡು ಕೋಮಿನ ದ್ವೇಷದ ಗಲಭೆ ಮತ್ತು ಮಹಿಳೆಯ ಮೇಲಿನ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ನಡೆದಿದ್ದು ಇದು ದೇಶದ ಮಹಿಳೆಯರು ತೆಲೆ ತಗ್ಗಿಸುವಂತಾಗಿದೆ. ಮಣಿಪುರದ ಕುಕಿ ಜನಾಂಗದ ಇಬ್ಬರು ಮಹಿಳೆಯರನ್ನು  ಬೆತ್ತಲೆಗೊಳಿಸಿ  ನಡುಬೀದಿಯಲ್ಲಿ ಮೆರವಣಿಗೆ ಮಾಡಿ ನಾನಾ ರೀತಿ ಚಿತ್ರಹಿಂಸೆ ನೀಡುತ್ತಾ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಘಟನೆಯಲ್ಲಿ ಇಡಿ ದೇಶವೆ ತಲೆತಗ್ಗಿಸುವಂತಹ ಅಮಾನುಷ ಕೃತ್ಯವಾಗಿದೆ.

ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಹಿಂದೂ ಯುವತಿಯರು ಶೌಚಾಲಯವನ್ನು ಬಳಸುವ ವೀಡಿಯೋವನ್ನು ಮುಸ್ಲಿಂ ಯುವತಿಯರು ಮಾಡಿದ್ದು, ಈಗಾಗಲೇ ಮಾಧ್ಯಮಗಳಲ್ಲಿ ಬಂದಂತೆ ತಮಾಷೆಗಾಗಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದೇವೆ ಎಂಬುದು ತೀರ ಬಾಲಿಷ ಹಾಗೂ ಪ್ರಕರಣವನ್ನು ದಾರಿ ತಪ್ಪಿಸುವ ಹೇಳಿಕೆ ಶೌಚ ಕ್ರಿಯೆ ಮಾಡುವಂತ ಖಾಸಗಿ ಜಾಗದಲ್ಲಿ ವಿಡಿಯೋ ಚಿತ್ರೀಕರಣ ಮಾಡುವಂತ ಹೇಯ ಕೃತ್ಯದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಒಳಗಾಗದೆ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕ್ರಮ ತೆಗೆದುಕೊಂಡು ಇದರ ಹಿಂದಿರುವಂತ ಷಡ್ಯಂತ್ರವನ್ನು ಬಯಲಿಗೆಳೆಯಬೇಕು. ಈ ಕುರಿತು ಜಿಲ್ಲಾಡಳಿತ ಸೂಕ್ತ ರೀತಿಯ ತನಿಖೆಯನ್ನು ನಡೆಸಿ ತಪ್ಪಿತಸ್ಥರ ಮೇಲೆ ಕಾನೂನಾತ್ಮಕ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದೆ.

ಧರ್ಮಸ್ಥಳದ ಸೌರ್ಜನ್ಯಳ ವಿರುದ್ದ ಹನ್ನೂಂದು ವರ್ಷಗಳ ಹಿಂದೆ ನಡೆದಂತಹ ಅನ್ಯಾಯ ಇದಕ್ಕೆ ನಿರಪರಾಧಿಗಳಿಗೆ ಶಿಕ್ಷೆಯಾಗಿರುವುದು ಶೋಚನೀಯವಾಗಿದೆ. ಇದರ ಬಗ್ಗೆ ಕೊಲಕುಂಶವಾಗಿ ಪರಿಶೀಲನೆಯನ್ನು ನಡೆಸುವುದರ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆಯನ್ನು ನೀಡಬೇಕಿದೆ. ಇದರಿಂದ ಸೌರ್ಜನ್ಯಳ ಸಾವಿಗೆ ನ್ಯಾಯವನ್ನು ಕೂಡಿಸಬೇಕಿದೆ ಎಂದು ಮಹಿಳಾ ಸಂಘಟನೆಗಳು  ಒತ್ತಾಯಿಸಿದೆ.

ಪ್ರಧಾನ ಮಂತ್ರಿಗಳು ಈ ಎಲ್ಲಾ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಿ, ದೇಶ, ರಾಜ್ಯ ಮತ್ತು ಜಿಲ್ಲೆಯ ಮಹಿಳೆಯರಿಗೆ ಸುರಕ್ಷಿತವಾದ ಕಾನೂನು ಅಗತ್ಯ ಇದೆ. ಸಮಸ್ತ ಮಹಿಳೆಯರಿಗೆ ಸುರಕ್ಷತೆ ಹಾಗೂ ಗೌರವದಿಂದ ಬದುಕಲು ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಮಹಿಳಾ ಘಟನಕದ ಅಧ್ಯಕ್ಷರಾದ ಶ್ರೀಮತಿ ನಿರ್ಮಲ ಬಸವರಾಜು, ಕಾರ್ಯದರ್ಶಿ ಶ್ರೀಮತಿ ರೀನಾ ವೀರಭದ್ರಪ್ಪ, ಲಿಂಗಾಯತ್ ಶಿವಸಿಂಪಿ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಅನಿತಾ ಮುರುಗೇಶ್, ಕಾರ್ಯದರ್ಶಿ ಶ್ರೀಮತಿ ಕವಿತಾ, ಶ್ರೀಮತಿ ಗಾಯತ್ರಿ ಶಿವರಾಂ, ಮಂಗಳಾ ವೀರಣ್ಣ, ಅನಿತಾ, ಸರೋಜ ಲಿಂಗರಾಜು, ಕುಸುಮ ರಾಜಣ್ಣ, ಶೈಲಾ ಉಮೇಶ್, ಸರೋಜ ಲಿಂಗಮೂರ್ತಿ, ಸುಜಾತಾ, ಕವಿತಾ ಸುರೇಶ್, ಕೆ.ಪಿ.ಎಂ.ಗಣೇಶಯ್ಯ, ಡಾ.ಲೋಕೇಶ ಅಗಸನಕಟ್ಟೆ, ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

error: Content is protected !!