Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

RCBಗೆ ಮತ್ತೆ ಕೊಹ್ಲಿಯೇ ನಾಯಕ : ಅಧಿಕೃತ ಘೋಷಣೆಯೊಂದೆ ಬಾಕಿ

---Advertisement---

 

ಆರ್ಸಿಬಿ ಕಪ್ ಗೆಲ್ಲದೇ ಹೋದಾಗಲೂ ಕೊಹ್ಲಿ ಮೇಲಿನ ಕ್ರೇಜ್ ಮಾತ್ರ ಕಡಿಮೆ ಆಗಿರಲಿಲ್ಲ. ಕೊಹ್ಲಿ ಫ್ಯಾನ್ಸ್ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದರು. ಆದರೆ ಕೊಹ್ಲಿಯನ್ನು ನಾಯಕತ್ವದಿಂದ ಇಳಿ ಫಾಫ್ ಡುಪ್ಲಿಸಿಸ್ ಅವರನ್ನು ನಾಯಕತ್ವ ಸ್ಥಾನಕ್ಕೆ ಕೂರಿಸಲಾಗಿತ್ತು. ಕಳೆದ ಬಾರಿಯೂ ಆರ್ಸಿಬಿ ಕಪ್ ತರುವಲ್ಲಿ ವಿಫಲವಾಯಿತು. ಈ ಬಾರಿಯೂ ಈಗಾಗಲೇ ಸಾಕಷ್ಟು ಮ್ಯಾಚ್ ಗಳಲ್ಲಿ ಸೋಲುಂಡಿದೆ. ಹೀಗಾಗಿ ನಾಯಕತ್ವ ಬದಲಾವಣೆಯ ಗಾಳಿ ಬೀಸುತ್ತಿದೆ. ಮತ್ತೆ ವಿರಾಟ್ ಕೊಹ್ಲಿಯೇ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಈ ಬಾರಿಯ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಐದು ಪಂದ್ಯಗಳನ್ನು ಆಡಿದೆ. ಆದರೆ ಅದರಲ್ಲಿ ಒಂದೇ ಒಂದು ಮ್ಯಾಚನ್ನಷ್ಟೇ ಗೆದ್ದಿದೆ. ನಾಲ್ಕು ಮ್ಯಾಚ್ ಗಳನ್ನು ಸೋತು ಕನ್ನಡಿಗರ ಕನಸಿಗೆ ನೀರು ಎರಚಿದೆ. ಹೀಗಾಗಿ ನಾಯಕತ್ವ ಬದಲಾವಣೆಯ ಚರ್ಚೆಯಾಗಿದೆ.

ಸೋಲಿಗೆ ಕಾರಣ ಆರ್ಸಿಬಿ ಬ್ಯಾಟಿಂಗ್ ಹಾಗೂ ಬೌಲಿಂಗ್. ಅದರಲ್ಲೂ ಕ್ಯಾಪ್ಟನ್ ಫಾಫ್ ಐದು ಪಂದ್ಯದಲ್ಲೂ ಹೇಳಿಕೊಳ್ಳುವ ಪ್ರದರ್ಶನವನ್ನೇನು ನೀಡಿಲ್ಲ. ಇದರ ಜೊತೆಗೆ ಕ್ಯಾಪ್ಟನ್ ಫಾಫ್ ಈಗಾಗಲೆ ನಾಯಕತ್ವದ ಒತ್ತಡದ ಬಗ್ಗೆ ಸಾಕಷ್ಟು ಸಲ ಮಾತನಾಡಿದ್ದಾರೆ. ಹೀಗಾಗಿ ಮತ್ತೆ ನಾಯಕತ್ವವನ್ನು ಕೊಹ್ಲಿ ಹೆಗಲಿಗೆ ಏರಿಸಲಿದ್ದಾರೆ ಎನ್ನಲಾಗಿದೆ.

ನಾಳೆ ಮುಂಬೈ ಇಂಡಿಯನ್ಸ್ ವಿರುದ್ಧ ಆರ್ಸಿಬಿ ಸೆಣೆಸಾಡಲಿದೆ. ಹೀಗಾಗಿ ನಾಳೆಯ ಪಂದ್ಯಕ್ಕೇನೆ ವಿರಾಟ್ ಕೊಹ್ಲಿ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸುತ್ತಿವೆ. ಕೊಹ್ಲಿ ನಾಯಕತ್ವದಿಂದಾದ್ರು ಆರ್ಸಿಬಿ ಪಂದ್ಯಗಳನ್ನು ಗೆದ್ದು, ಕಪ್ ಎತ್ತಿಕೊಂಡು ಬರಲಿ ಎಂದು ಅಭಿಮಾನಿಗಳು ಹಾರೈಸಿತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment