ಚಿತ್ರದುರ್ಗ, ಜೂ.05 : ನಗರದ ಜೆಸಿಆರ್ ಬಡಾವಣೆ ನಿವಾಸಿ ಕೃಷಿಕ ವಿರುಪಾಕ್ಷಪ್ಪ (103) ಭಾನುವಾರ ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ. ಕಾತ್ರಾಳ್ ಕಾವಲಿನ ತೋಟದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.



