Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚೀನಾದಲ್ಲಿ ಮತ್ತೆ ವೈರಸ್ ಕಾಟ : ಕರ್ನಾಟಕದಲ್ಲೂ ಅಲರ್ಟ್

---Advertisement---

ಚೀನಾದಿಂದ ಶುರುವಾದ ಕೊರೊನಾ ವೈರಸ್ ನಿಂದ ಇಡೀ ದೇಶವೇ ಎಷ್ಟೆಲ್ಲಾ ಸಮಸ್ಯೆ ಅನುಭವಿಸಿದೆ ಎಂದು ಎಲ್ಲರಿಗೂ ಗೊತ್ತಿದೆ. ಈಗಲೂ ಅದೆಷ್ಟೋ ಕ್ಷೇತ್ರಗಳು ನಷ್ಟದಿಂದ ಹೊರ ಬಂದಿಲ್ಲ. ಎಷ್ಟೋ ಜನರ ಜೀವನ ಬೀದಿಗೆ ಬಂದಿದೆ. ಎಷ್ಟೋ ಆತ್ಮೀಯರನ್ನು ಕಳೆದುಕೊಂಡು ಆಗಿದೆ. ಎಷ್ಟೋ ಮನೆಯ ಯಜಮಾನರು ಇಲ್ಲದೆ ಸಂಸಾರಗಳು ಕಷ್ಟದಲ್ಲಿವೆ. ಎರಡು ವರ್ಷವಾದರೂ ಅದರಿಂದ ಚೇತರಿಕೆ ಕಂಡಿಲ್ಲ. ಹೀಗಿರುವಾಗ ಇದೀಗ ಮತ್ತೆ ಚೀನಾದಲ್ಲಿ ವೈರಸ್ ಒಂದು ಆತಂಕ ಹುಟ್ಟಿಸುತ್ತಿದೆ. ಅದುವೇ ನ್ಯೂಮೋನಿಯಾ.

 

ಚೀನಾದಲ್ಲಿ ಹೆಚ್ಚಾಗುತ್ತಿರುವ ನ್ಯೂಮೋನಿಯಾ ಆತಂಕ ಈಗ ರಾಜ್ಯದಲ್ಲೂ ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಿದೆ. ಎಲ್ಲಾ ರಾಜ್ಯದಲ್ಲೂ ಎಚ್ಚರದಿಂದ ಇರಲು ಕೇಂದ್ರ ಸರ್ಕಾರ ಗೈಡ್ ಲೈನ್ ಹೊರಡಿಸಿದೆ. ಕೊರೊನಾ ಸಮಯದಲ್ಲಿ ಏನೆಲ್ಲಾ ಮುಂಜಾಗ್ರತ ಕ್ರಮ ವಹಿಸಿದ್ದರೋ ಆ ಕ್ರಮಗಳನ್ನು ಅನುಸರಿಸಲು ಸೂಚಿಸಿದೆ. ಜನರು ಕೂಡ ಆರೋಗ್ಯದ ಕಡೆಗೆ ಗಮನ ಹರಿಸಲು ಸೂಚಿಸಿದೆ.

ಯಾವುದೇ ಕಾಯಿಲೆಯ ಲಕ್ಷಣಗಳು ಕಂಡರೂ ತಾವೇ ಔಷಧಿ ತೆಗೆದುಕೊಳ್ಳುವ ಬದಲಿಗೆ ವೈದ್ಯರನ್ನು ಸಂಪರ್ಕಿಸಲು ಸೂಚನೆ ನೀಡಲಾಗಿದೆ. ಕೆಮ್ಮುವಾಗ ಬಾಯಿ ಮುಚ್ಚಿಕೊಂಡು ಕೆಮ್ಮಬೇಕು, ಆಗಾಗ ಕೈಗಳನ್ನು ತೊಳೆಯುತ್ತಿರಬೇಕು, ಅನಗತ್ಯವಾಗಿ ಕಣ್ಣು, ಮೂಗು ಮುಟ್ಟಿಕೊಳ್ಳಬಾರದು, ಜನಸಂದಣಿ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು, ಪೌಷ್ಟಿಕಾಂಶ ಆಹಾರ ಸೇವನೆ, ಸಾರ್ವಜನಿಕ ಸ್ಥಳದಲ್ಲೇ ಉಗುಳದೆ ಇರುವುದು ಹೀಗೆ ಆರೋಗ್ಯಕರ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...