Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚೀನಾದಲ್ಲಿ ಮತ್ತೆ ವೈರಸ್ ಕಾಟ : ಕರ್ನಾಟಕದಲ್ಲೂ ಅಲರ್ಟ್

Facebook
Twitter
Telegram
WhatsApp

ಚೀನಾದಿಂದ ಶುರುವಾದ ಕೊರೊನಾ ವೈರಸ್ ನಿಂದ ಇಡೀ ದೇಶವೇ ಎಷ್ಟೆಲ್ಲಾ ಸಮಸ್ಯೆ ಅನುಭವಿಸಿದೆ ಎಂದು ಎಲ್ಲರಿಗೂ ಗೊತ್ತಿದೆ. ಈಗಲೂ ಅದೆಷ್ಟೋ ಕ್ಷೇತ್ರಗಳು ನಷ್ಟದಿಂದ ಹೊರ ಬಂದಿಲ್ಲ. ಎಷ್ಟೋ ಜನರ ಜೀವನ ಬೀದಿಗೆ ಬಂದಿದೆ. ಎಷ್ಟೋ ಆತ್ಮೀಯರನ್ನು ಕಳೆದುಕೊಂಡು ಆಗಿದೆ. ಎಷ್ಟೋ ಮನೆಯ ಯಜಮಾನರು ಇಲ್ಲದೆ ಸಂಸಾರಗಳು ಕಷ್ಟದಲ್ಲಿವೆ. ಎರಡು ವರ್ಷವಾದರೂ ಅದರಿಂದ ಚೇತರಿಕೆ ಕಂಡಿಲ್ಲ. ಹೀಗಿರುವಾಗ ಇದೀಗ ಮತ್ತೆ ಚೀನಾದಲ್ಲಿ ವೈರಸ್ ಒಂದು ಆತಂಕ ಹುಟ್ಟಿಸುತ್ತಿದೆ. ಅದುವೇ ನ್ಯೂಮೋನಿಯಾ.

 

ಚೀನಾದಲ್ಲಿ ಹೆಚ್ಚಾಗುತ್ತಿರುವ ನ್ಯೂಮೋನಿಯಾ ಆತಂಕ ಈಗ ರಾಜ್ಯದಲ್ಲೂ ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಿದೆ. ಎಲ್ಲಾ ರಾಜ್ಯದಲ್ಲೂ ಎಚ್ಚರದಿಂದ ಇರಲು ಕೇಂದ್ರ ಸರ್ಕಾರ ಗೈಡ್ ಲೈನ್ ಹೊರಡಿಸಿದೆ. ಕೊರೊನಾ ಸಮಯದಲ್ಲಿ ಏನೆಲ್ಲಾ ಮುಂಜಾಗ್ರತ ಕ್ರಮ ವಹಿಸಿದ್ದರೋ ಆ ಕ್ರಮಗಳನ್ನು ಅನುಸರಿಸಲು ಸೂಚಿಸಿದೆ. ಜನರು ಕೂಡ ಆರೋಗ್ಯದ ಕಡೆಗೆ ಗಮನ ಹರಿಸಲು ಸೂಚಿಸಿದೆ.

ಯಾವುದೇ ಕಾಯಿಲೆಯ ಲಕ್ಷಣಗಳು ಕಂಡರೂ ತಾವೇ ಔಷಧಿ ತೆಗೆದುಕೊಳ್ಳುವ ಬದಲಿಗೆ ವೈದ್ಯರನ್ನು ಸಂಪರ್ಕಿಸಲು ಸೂಚನೆ ನೀಡಲಾಗಿದೆ. ಕೆಮ್ಮುವಾಗ ಬಾಯಿ ಮುಚ್ಚಿಕೊಂಡು ಕೆಮ್ಮಬೇಕು, ಆಗಾಗ ಕೈಗಳನ್ನು ತೊಳೆಯುತ್ತಿರಬೇಕು, ಅನಗತ್ಯವಾಗಿ ಕಣ್ಣು, ಮೂಗು ಮುಟ್ಟಿಕೊಳ್ಳಬಾರದು, ಜನಸಂದಣಿ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು, ಪೌಷ್ಟಿಕಾಂಶ ಆಹಾರ ಸೇವನೆ, ಸಾರ್ವಜನಿಕ ಸ್ಥಳದಲ್ಲೇ ಉಗುಳದೆ ಇರುವುದು ಹೀಗೆ ಆರೋಗ್ಯಕರ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!