Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ವಿಶಾಖ ಮಳೆಯ ಆರ್ಭಟ | ಜಿಲ್ಲೆಯಾದ್ಯಂತ ಧಾರಾಕಾರ ಮಳೆ, ಕೆಲವೆಡೆ ಹಾನಿ…!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ನವಂಬರ್.08  : ಜಿಲ್ಲೆಯಲ್ಲಿ ವಿಶಾಖ ಮಳೆ ಆರ್ಭಟ ಜೋರಾಗಿದೆ. ಬಿಸಿಲಿಗೆ ತತ್ತರಿಸಿದ್ದ ಜನತೆಗೆ ಚಿತ್ರದುರ್ಗದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ತಂಪೆರದಿದೆ. ಬುಧವಾರ ಸಂಜೆಯಿಂದ  ಭರ್ಜರಿ ಮಳೆ ಸುರಿಯುತ್ತಿದೆ. ಕಳೆದ ಎರಡು ದಿನ ಸ್ವಲ್ಪ ಮಳೆಯಾಗಿತ್ತು. ಆದರೆ ಬುಧವಾರ ಸಂಜೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ರಾತ್ರಿ 8 ಗಂಟೆಯಾದರೂ ಮಳೆ ಸುರಿಯುತ್ತಲೇ ಇತ್ತು.

ಈ ವಿಶಾಖ ಮಳೆಯು ಈ ತಿಂಗಳು ಮೂರನೇ ತಾರೀಖಿನಂದ ಆರಂಭವಾಗಿ ಮುಂದಿನ ಹತ್ತು ದಿನಗಳ ಕಾಲ ಸುರಿಯುವ ಸಾಧ್ಯತೆಯಿದೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಚರಂಡಿಯಲ್ಲಿ ಪ್ರವಾಹದಂತೆ ನೀರು ಹರಿಯುತ್ತಿತ್ತು. ರಸ್ತೆಯಲ್ಲಿನ ಗುಂಡಿಯಲ್ಲಿ ನೀರು ತುಂಬಿಕೊಂಡು ಕೆಲವೆಡೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ನಗರದ ಗಾಂಧಿ ವೃತ್ತದ ಬಳಿಯ ಬೀದಿಬದಿಯ ವ್ಯಾಪಾರಿಗಳು ಪರದಾಡಿದರು.
ನಗರಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಬಳಿ, ರೈಲ್ವೆ ಕೆಳಸೇತುವೆ ಕೆಳಗೆ, ತುರುವನೂರಿಗೆ ಹೋಗುವ ರಸ್ತೆಯ ಕೆಳಸೇತುವೆ ಸೇರಿದಂತೆ ಹಲವೆಡೆ ನೀರು ನಿಂತಿದ್ದು ವಾಹನ ಸವಾರರು ಪರದಾಡುವಂತಾಯಿತು.

ಮಳೆಯೇ ಇಲ್ಲದೇ ಕಂಗಾಲಾಗಿದ್ದ ರೈತನ ಮೊಗದಲ್ಲಿ ಮಂದಹಾಸ ಮೂಡಿದೆ. ಅಡಿಕೆ ಮತ್ತು ತೆಂಗಿನ ತೋಟಗಳಿಗೆ ಹಿಂಗಾರು ಮಳೆಯಿಂದ ಅನುಕೂಲವಾಗಿದ್ದರೆ, ಈಗಾಗಲೇ ಕೊಯಿಲಿಗೆ ಬಂದಿರುವ ರಾಗಿ, ಶೇಂಗಾ, ಮೆಕ್ಕೆಜೋಳ ಬೆಳೆ ನೆಲಕಚ್ಚುವ ಭೀತಿ ಎದುರಾಗಿದೆ. ಮುಂದಿನ ದಿನಗಳಲ್ಲಿ ಕಡಲೆ, ಬಿಳಿ ಕುಸುಮೆ, ಸೂರ್ಯಕಾಂತಿ ಹಾಗೂ ಜೋಳದಂತಹ ಕೃಷಿ ಬೆಳೆಗಳನ್ನು ಬಿತ್ತನೆ ಮಾಡುವ ರೈತರಿಗೆ ಈ ಮಳೆ ಅನುಕೂಲವಾಗಲಿದೆ. ಮುಂಗಾರು ಹಂಗಾಮು ಇಲ್ಲದೆ ನಿರಾಶನಾಗಿದ್ದ ರೈತನಿಗೆ ಹಿಂಗಾರು ಮಳೆ ಭರವಸೆ ಮೂಡಿಸಿದೆ.

ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು,
ಮಂಗಳವಾರ ಸುರಿದ ಮಳೆ ವಿವರದನ್ವಯ ಜಿಲ್ಲೆಯ ಹೊಸದುರ್ಗದಲ್ಲಿ  26.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಬಾಗೂರಿನಲ್ಲಿ 4.3 ಮಿ.ಮೀ, ಮತ್ತೋಡಿನಲ್ಲಿ 6.3 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 2.4 ಮಿ.ಮೀ, ರಾಮಗಿರಿ 24.4 ಮಿ.ಮೀ ಮಳೆಯಾಗಿದೆ.

24 ಮನೆಗಳು ಭಾಗಶಃ ಹಾನಿ: ಮಂಗಳವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ  ಒಟ್ಟು 24 ಮನೆಗಳು ಭಾಗಶಃ ಹಾನಿಯಾಗಿದ್ದು, 1 ಸಣ್ಣ ಜಾನುವಾರು ಹಾನಿಯಾಗಿದೆ.
ಹೊಸದುರ್ಗ ತಾಲ್ಲೂಕಿನಲ್ಲಿ 17 ಮನೆಗಳು ಭಾಗಶಃ ಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 5 ಮನೆಗಳು ಭಾಗಶಃ ಹಾನಿಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 2 ಮನೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!