Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಶ್ವಬಂಧು ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜೂ.15)  : ಇಲ್ಲಿನ ಎ.ಪಿ.ಎಂ.ಸಿ.ಯಲ್ಲಿರುವ ವಿಶ್ವಬಂಧು ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಜಿ.ಬಿ.ತೀರ್ಥಪ್ಪ, ಉಪಾಧ್ಯಕ್ಷರಾಗಿ ಟಿ.ನಾಗರಾಜ್ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜಿ.ಬಿ.ತೀರ್ಥಪ್ಪ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಟಿ.ನಾಗರಾಜ್ ಇವರುಗಳು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಲಕ್ಷ್ಮಿರವರು ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಬಿ.ತೀರ್ಥಪ್ಪ ಮಾತನಾಡಿ ಎಲ್ಲಾ ನಿರ್ದೇಶಕರುಗಳು ನನ್ನ ಮೇಲೆ ಭರವಸೆಯಿಟ್ಟು ಅವಿರೋಧವಾಗಿ ಆಯ್ಕೆ ಮಾಡಿದ್ದೀರಿ. ಬದಲಾವಣೆಗೆ ತಕ್ಕಂತ ಹೊಸತನವನ್ನು ಕಂಡುಕೊಂಡು ವಿಶ್ವಬಂಧು ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಇನ್ನು ಹೆಚ್ಚು ವಿಸ್ತರಿಸಿ ಸಾಲ ನೀಡುವುದರ ಜೊತೆಗೆ ವಸೂಲಾತಿಯನ್ನು ಮಾಡಿ ಬರುವ ಲಾಭದಿಂದ ಅಭಿವೃದ್ದಿಪಡಿಸಬೇಕಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು ಎಂದು ಕೋರಿದರು.

ಮಾಜಿ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಮಾತನಾಡುತ್ತ ಐದು ವರ್ಷಗಳ ಅವಧಿಗೆ ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದೇವೆ. ಎಲ್ಲರ ಸಲಹೆ, ಸೂಚನೆ, ಬೆಂಬಲ ಪಡೆದು ವಿಶ್ವಬಂಧು ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯನ್ನು ಇನ್ನು ಬಲಪಡಿಸಬೇಕಿದೆ. ಸಾಲ ಉತ್ತಮ ರೀತಿಯಲ್ಲಿ ವಸೂಲಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಲಾಭ ಪಡೆಯುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಕೆಲಸ ಮಾಡೋಣ ಎಂದು ಹೇಳಿದರು.

ನಿರ್ದೇಶಕರುಗಳಾದ ಜಿ.ಬಿ.ಶೇಖರಪ್ಪ, ಹೆಚ್.ಎಸ್.ಶಿವಪ್ರಸಾದ್, ಸಿ.ಮಹೇಶ್ವರಪ್ಪ, ದಿವಾಕರ್ ಸಂಕೋಳ್, ಜಿ.ಎನ್.ಶಿವಕುಮಾರ್, ಶ್ರೀಮತಿ ಎಸ್.ಶೋಭಾವತಿ, ಜಿ.ಎನ್.ಶಿವಕುಮಾರ್, ಟಿ.ರುದ್ರಪ್ಪ, ಓಬಳೇಶಪ್ಪ ಚುನಾವಣೆಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!